ಬೆಂಗಳೂರಿನಲ್ಲಿ ಭೀಕರ ಬೆಂಕಿ ಅವಘಡ – 8 ಮನೆಗಳು ಭಸ್ಮ – ಓರ್ವನಿಗೆ ಗಂಭೀರ ಗಾಯ

ಮಂಗಳೂರು(ಬೆಂಗಳೂರು): ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರ ಬಳಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಶೀಟಿನ ಮನೆಗಳು ಬೆಂಕಿಗಾಹುತಿಯಾಗಿರುವ ಘಟನೆ ಸೆ.18ರ ಮಧ್ಯಾಹ್ನ ನಡೆದಿದೆ.

ಡೆಕೊರೇಶನ್ ವಸ್ತುಗಳ ಸಂಗ್ರಹವಿಟ್ಟಿದ್ದ ಗೋದಾಮಿನಲ್ಲಿ ಶಾರ್ಟ್‌ ಸರ್ಕೂಟ್‌ನಿಂದ ಈ ಘಟನೆ ಸಂಭವಿಸಿದೆ.  ಘಟನೆಯಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗೂ ಬೆಂಕಿ ತಗುಲಿ ಬೆಂಕಿ ಇನ್ನಷ್ಟು ವ್ಯಾಪಿಸಿದೆ ಎಂದು ಪ್ರಾಥಮಿಕ  ಮಾಹಿತಿಯಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸು ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗೊಂಡಿದ್ದು, ಆತನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

LEAVE A REPLY

Please enter your comment!
Please enter your name here