ಚೈತ್ರಾ ಕುಂದಾಪುರ ವಂಚನೆ ಪ್ರಕರಣ- ಮೂರನೇ ಆರೋಪಿ ಅಭಿನವ ಹಾಲಶ್ರೀ ಪೊಲೀಸ್‌ ವಶಕ್ಕೆ?

ಮಂಗಳೂರು(ಬೆಂಗಳೂರು): ಚೈತ್ರಾ ಕುಂದಾಪುರ ನೇತ್ರತ್ವದ ಕಬಾಬ್‌ ಗ್ಯಾಂಗ್‌ ವಂಚನೆ ಪ್ರಕರಣದ ಮೂರನೇ ಆರೋಪಿ ಪೊಲೀಸರ ಬಲೆಗೆ ಬಿದ್ದಿರುವುದಾಗಿ ಮೂಲಗಳು ತಿಳಿಸಿವೆ.

ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬೇಕಾಗಿದ್ದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಒಡಿಶಾದಲ್ಲಿ ತಮ್ಮ ಬಲೆಗೆ ಕೆಡವಿದ್ದಾರೆ ಎಂದು ತಿಳಿದು ಬಂದಿದ್ದು, ಇಂದು ಸಂಜೆಯೊಳಗೆ ಪೊಲೀಸರು ಬೆಂಗಳೂರಿಗೆ ಕರೆದು ತರಲಿದ್ದಾರೆ ಎನ್ನಲಾಗಿದೆ. ಪ್ರಕರಣ ಮುಖ್ಯ ಆರೋಪಿ ಚೈತ್ರಾ ನಿನ್ನೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ತನಿಖೆ ಮುಂದುವರೆದಿದೆ.

LEAVE A REPLY

Please enter your comment!
Please enter your name here