ರಾಜ್ಯಕ್ಕೆ ಆಗಮಿಸಿದ ಕೇಂದ್ರದ ಬರ ಅಧ್ಯಯನ ತಂಡ-4 ದಿನಗಳ ಕಾಲ 13 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಪರಿಶೀಲನೆ

ಮಂಗಳೂರು: ಬರಗಾಲದ ಹಿನ್ನಲೆಯಲ್ಲಿ ಅಧ್ಯಯನಕ್ಕಾಗಿ ಕೇಂದ್ರದ 3 ತಂಡಗಳು ರಾಜ್ಯಕ್ಕೆ ಇಂದು ಆಗಮಿಸಲಿದ್ದು ಈ ತಂಡವು 13 ಜಿಲ್ಲೆಗಳಲ್ಲಿನ ಬರ ಪರಿಸ್ಥಿತಿಯನ್ನು ನಾಲ್ಕು ದಿನಗಳ ಕಾಲ ಪರಿಶೀಲನೆ ನಡೆಸಲಿದೆ.

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ಬರಗಾಲ ಘೋಷಣೆಯಾಗಿದೆ. 195 ತಾಲೂಕುಗಳು ಬರಗಾಲ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ಇಂದು ಕೇಂದ್ರ ಸರ್ಕಾರದ ಬರ ಅಧ್ಯಯನದ 3 ತಂಡಗಳು ಕರ್ನಾಟಕಕ್ಕೆ ಭೇಟಿ ನೀಡಿದೆ. ಇಂದಿನಿಂದ ನಾಲ್ಕು ದಿಗನಳ ಕಾಲ ವಿವಿಧ ಬರ ಪೀಡಿತ ಜಿಲ್ಲೆಗಳಲ್ಲಿ ತಂಡ ಪ್ರವಾಸ ಕೈಗೊಂಡು, ಪರಿಶೀಲನೆ ನಡೆಸಲಿವೆ. ಕೇಂದ್ರ ತಂಡಗಳು 10 ಸದಸ್ಯರನ್ನ ಒಳಗೊಂಡಿದ್ದು, ರಾಜ್ಯದ ಸ್ಥಳೀಯ ಅಧಿಕಾರಿಗಳೊಂದಿಗೆ ಸುಮಾರು 13 ಜಿಲ್ಲೆಗಳ ವ್ಯಾಪ್ತಿಯ ವಿವಿಧ ಬರ ಪೀಡಿತ ತಾಲ್ಲೂಕುಗಳಿಗೆ ಭೇಟಿ ನೀಡಿ, ಮಳೆ ಕೊರತೆ, ಬೆಳೆ ನಷ್ಟದ ಬಗ್ಗೆ ಪರಿಶೀಲನೆ, ಅಧ್ಯಯನ ನಡೆಸಲಿದೆ. ಸತತ ನಾಲ್ಕು ದಿನಗಳ ಕಾಲ ಕೇಂದ್ರ ಸರ್ಕಾರದಿಂದ ಆಗಮಿಸಿದಂತ 3 ಬರ ಅಧ್ಯಯನ ತಂಡದ ಅಧಿಕಾರಿಗಳು, ಕರ್ನಾಟಕದ ಬರ ಪರಿಸ್ಥಿತಿ ಅವಲೋಕಿಸಿ, ತನ್ನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದೆ. ಆ ಬಳಿಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರ ನಿರ್ವಹಣೆಗಾಗಿ ಪರಿಹಾರದ ಹಣವನ್ನು ಬಿಡುಗಡೆ ಮಾಡೋ ಸಾಧ್ಯತೆ ಇದೆ.

 

LEAVE A REPLY

Please enter your comment!
Please enter your name here