



ಮಂಗಳೂರು(ಬಂಟ್ವಾಳ): ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ 9 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಂಗಳೂರು ಮಂಜನಾಡಿ ಗ್ರಾಮದ ನಾಟೆಕಲ್ ನಿವಾಸಿ ಅಶ್ರಫ್ ಬಂಧಿತ ಆರೋಪಿ.







2015 ರಲ್ಲಿ ಗಾಂಜಾ ಮಾರಾಟ ಮಾಡಿದ್ದ ಆರೋಪದ ಮೇಲೆ ಬಂಧನವಾಗಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿ ಅಶ್ರಫ್ ಆ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ಎಸ್.ಐ.ಹರೀಶ್ ಮತ್ತು ಮೂರ್ತಿ ಎಂ.ಅರ್.ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್, ಯೋಗೇಶ್, ವಿಜಯಕುಮಾರ್ ಅವರು ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.















