ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಮಂಗಳೂರು(ಸುಬ್ರಹ್ಮಣ್ಯ): ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪತ್ನಿ ಚೆನ್ನಮ್ಮ ಅವರೊಂದಿಗೆ ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಭಾನುವಾರ ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ದೇವೇಗೌಡರ ಕುಟುಂಬ ಅ.9ರ ಸೋಮವಾರ ಬೆಳಗ್ಗೆ ಶ್ರೀ ದೇವರ ದರ್ಶನ ಪಡೆದು, ಕ್ಷೇತ್ರದಲ್ಲಿ ವಿವಿಧ ಸೇವೆ ನೆರವೇರಿಸಿದ್ದಾರೆ. ದೇವೇಗೌಡರು ನಿನ್ನೆ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವವರಿದ್ದರು.

ಆದರೆ ಸಕಲೇಶಪುರ ಮತ್ತು ಕುಕ್ಕೆ ಸುಬ್ರಹ್ಮಣ್ಯ ಪ್ರದೇಶದಲ್ಲಿ ದಟ್ಟವಾದ ಮೋಡ ಕವಿದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ ಪ್ರಯಾಣ ತೊರೆದು ರಾತ್ರಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, ಬಳಿಕ ರಸ್ತೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದರು.

 

LEAVE A REPLY

Please enter your comment!
Please enter your name here