ಬೆಂಗಳೂರು, ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ – ಆರೋಪಿ ಗುರುತು ‍ಪತ್ತೆ – ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಮಂಗಳೂರು(ಬೆಳಗಾವಿ): ಹಿಂಡಲಗಾ ಕೇಂದ್ರ ಕಾರಾಗೃಹ ಹಾಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಗಳಿಗೆ ಬಾಂಬ್‌ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ ಆರೋಪಿಯ ಗುರುತು‍ ಪತ್ತೆ ಮಾಡಲಾಗಿದೆ.

ಜಿಲ್ಲೆಯ ಹುಕ್ಕೇರಿ ಪಟ್ಟಣದ ನಿವಾಸಿ ಕಿರಣ ಮೋಷಿ (48) ಗುರುತಿಸಲಾದ ಆರೋಪಿ. ಸದ್ಯ ಈತ ಬೆಂಗಳೂರಿನಲ್ಲಿದ್ದು, ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಓಡಾಡುತ್ತಿದ್ದಾನೆ. ಈತನ ಬಂಧನಕ್ಕೆ ತಂಡ ರಚಿಸಲಾಗಿದ್ದು, ಬೆಂಗಳೂರಿಗೆ ತೆರಳಿದೆ ಎಂದು ನಗರ ಪೊಲೀಸ್‌ ಆಯುಕ್ತ ಎಸ್‌.ಎನ್‌. ಸಿದ್ರಾಮಪ್ಪ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಅಕ್ಟೋಬರ್‌ 8ರಂದು ಕರೆ ಮಾಡಿದ ಆರೋಪಿ, ಬಂದಿಖಾನೆಗಳಲ್ಲಿ ಬಾಂಬ್‌ ಸ್ಫೋಟಿಸುವುದು, ಗಲಭೆ ಎಬ್ಬಿಸುವುದು ಹಾಗೂ ಜೀವಹಾನಿ ಮಾಡುವ ಬೆದರಿಕೆ ಒಡ್ಡಿದ್ದ. ಈ ಬಗ್ಗೆ ಶೇಷ ಅವರು ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಯು ತನ್ನ ಪತ್ನಿ ಹೆಸರಿನಲ್ಲಿರುವ ಸಿಮ್‌ ಬಳಸಿ ಕರೆ ಮಾಡಿದ್ದಾನೆ. ಮೂರು ಬೇರೆಬೇರೆ ಮೊಬೈಲ್‌ ಸಂಖ್ಯೆಗಳಿಂದ ಕರೆ ಬಂದಿದ್ದು, ಮೂರನ್ನೂ ಜಾಲಾಡಲಾಗಿದೆ. ಒಂದು ಸಂಖ್ಯೆ ಆತನ ಪತ್ನಿ ಹೆಸರಿನಲ್ಲಿರುವುದು ಗೊತ್ತಾಗಿದೆ. ಆರೋಪಿಯ ಜಾಡು ಪತ್ತೆ ಹಚ್ಚಲಾಗಿದ್ದು, ಶೀಘ್ರ ಬಂಧಿಸಲಾಗುವುದು ಎಂದು ಸಿದ್ರಾಮಪ್ಪ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here