ಮಂಗಳೂರು: ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ಆರೋಪದಲ್ಲಿ ಐದು ಮಂದಿ ಸೆರೆ

ಮಂಗಳೂರು: ವಿಶ್ವಕಪ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದ ಆರೋಪದ ಮೇರೆಗೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಯಲ್ಲಿ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬೆಳುವಾಯಿ ಗ್ರಾಮದ ನವೀದ್ (30), ಪಡುಮಾರ್ನಾಡು ಗ್ರಾಮದ ಉಮೇಶ್ (40) ಮತ್ತು ಪ್ರಸಾದ್ ದೇವಾಡಿಗ (35) ಹಾಗೂ ಮಾರ್ಪಾಡಿ ಗ್ರಾಮದ ಅಲಂಗಾರು ಎಂಬಲ್ಲಿನ ಸುಖೇಶ್ ಆಚಾರ್ಯ (33) ಪುತ್ತಿಗೆ ಗ್ರಾಮದ ಬವಸನಕಜೆ ಎಂಬಲ್ಲಿನ ಪಲಕಳ ಮನೆಯ ಪುರಂದರ ಕುಲಾಲ್ (38) ಎಂದು ಗುರುತಿಸಲಾಗಿದೆ.

ಶ್ರೀಲಂಕಾ ಮತ್ತು ಆಸ್ಪ್ರೇಲಿಯಾ ಕ್ರಿಕೆಟ್ ಮ್ಯಾಚ್‌ನಲ್ಲಿ ಬೆಟ್ಟಿಂಗ್ ಮಾಡಲು ಗೂಗಲ್ ಪೇ ಅಥವಾ ಪೋನ್ ಪೇ ಮೂಲಕ ಹಣವನ್ನು ಪಡೆದಿರುವುದಾಗಿ ಮತ್ತು ಈ ವೆಬ್‌ಸೈಟ್‌ನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ನವೀದ್ ಮತ್ತು ಸುಖೇಶ್ ಆಚಾರ್ಯ ಪೊಲೀಸರ ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದಾರೆ. ಆರೋಪಿಗಳಿಂದ ಮೊಬೈಲ್ ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here