ಹುಲಿ ಉಗುರಿನ ಲಾಕೆಟ್- ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ-‌ ಬಿಗ್‌ ಬಾಸ್‌ ಮನೆಯಲ್ಲಿಯೇ ಬಂಧಿಸಿದ ಅರಣ್ಯಾಧಿಕಾರಿಗಳು

ಮಂಗಳೂರು( ಬೆಂಗಳೂರು): ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರು ಸಂತೋಷನನ್ನು ಬಿಗ್‌ ‌ಬಾಸ್   ಮನೆಯಿಂದ ಬಂಧಿಸಲಾಗಿದೆ. ಕೊರಳಲ್ಲಿ ಹುಲಿ ಉಗುರಿನ ಲಾಕೆಟ್ ಧರಿಸಿದ ಹಿನ್ನೆಲೆಯಲ್ಲಿ ಸಂತೋಷ್‌ ನನ್ನು  ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಬಿಗ್ ಬಾಸ್ ಮನೆಯಲ್ಲಿಯೇ ಬಂಧಿಸಲಾಗಿದೆ. ರಾಮೋಹಳ್ಳಿ ಅರಣ್ಯ ಅಧಿಕಾರಿಗಳು ಸಂತೋಷನನ್ನು ಬಂಧಿಸಿ, ಕಗ್ಗಲಿಪುರ ಅರಣ್ಯ ಕಚೇರಿಯಲ್ಲಿ ವಿಚಾರಣೆ ನಡೆಸಿದ್ದಾರೆ.

ಹಳ್ಳಿಕಾರ್‌ ತಳಿಯ ಜಾನುವಾರು ಸಾಕಾಣಿಕೆ ಮೂಲಕ ಜನಪ್ರಿಯತೆ ಪಡೆದಿರುವ ವರ್ತೂರು ಸಂತೋಷ್‌ ಹಳ್ಳಿಕಾರ್‌ ಕ್ಯಾಟಲ್‌ ಬ್ರೀಡ್‌ ಅಥವಾ ಅಖಿಲ ಭಾರತ ಹಳ್ಳಿಕಾರ್‌ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಂತೋಷ್ ಹಳ್ಳಿಕಾರ್‌ ಒಡೆಯ ಎಂದೇ ಪ್ರಸಿದ್ದಿ ಪಡೆದಿದ್ದಾರೆ.

LEAVE A REPLY

Please enter your comment!
Please enter your name here