ಖಾಸಗಿ ಸಿಟಿ ಬಸ್ ಧಾವಂತಕ್ಕೆ ಪಾದಚಾರಿ ಬಲಿ

ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್ ಬಳಿಯ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿ ಖಾಸಗಿ ಬಸ್ಸಿನ ಧಾವಂತಕ್ಕೆ ಪಾದಚಾರಿಯೊಬ್ಬರು ಬಸ್ಸಿನಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಅ23ರಂದು ಸಂಜೆ ಸಂಭವಿಸಿದೆ.

ಮಂಗಳೂರಿನ ಸ್ಟೇಟ್ ಬ್ಯಾಂಕ್ ವೃತ್ತದಿಂದ ಕೊಣಾಜೆ ಬಳಿಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿದ್ದಂತೆ ವ್ಯಕ್ತಿಯೊಬ್ಬರು ಅಡ್ಡ ಬಂದಿದ್ದು ನೇರವಾಗಿ ಬಸ್ಸಿನ ಮುಂದಿನ ಚಕ್ರದಡಿಗೆ ಬಿದ್ದು ವ್ಯಕ್ತಿಯ ತಲೆ ಪೂರ್ತಿ ಛಿದ್ರಗೊಂಡು ಸ್ಥಳದಲ್ಲೇ  ಮೃತಪಟ್ಟಿದ್ದಾರೆ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು, ಬಸ್ ಚಾಲಕನನ್ನು ವಶಕ್ಕೆ ಪಡೆದ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here