ಮೀನು ವ್ಯಾಪಾರಿದಲ್ಲಿ ನಷ್ಟ – ಸಾಲದ ಶೂಲಕ್ಕೆ ಸಿಕ್ಕ ಯುವಕ ಆತ್ಮಹತ್ಯೆ

ಮಂಗಳೂರು(ಬಂಟ್ವಾಳ) : ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಸಜೀಪದಲ್ಲಿ ಅ.23ರಂದು ನಡೆದಿದೆ. ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ‌ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.

ಹಸಿ ಮೀನು ವ್ಯಾಪಾರ ಮಾಡುತ್ತಿದ್ದ ಸನತ್ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದು, ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಲಿಲ್ಲ. ಟೆಂಪೋವನ್ನು ಮಾರಾಟ ಮಾಡಿದ್ದ ಈತ ಮಾನಸಿಕವಾಗಿ ‌ನೊಂದಿದ್ದ ಎಂದು ಹೇಳಲಾಗಿದೆ. ಮನೆ ಮಂದಿ ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ‌ನವರಾತ್ರಿ‌ ಪೂಜೆಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿದ್ದು, ಮನೆಯವರು ಪೂಜೆ ಮುಗಿಸಿಕೊಂಡು ಮನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here