ಬನ್ನೇರುಘಟ್ಟ ದಸರಾ ಆನೆಯನ್ನು ಸಾಗಿಸುತ್ತಿದ್ದ ಲಾರಿ ಹರಿದು ಚಾಲಕ ಸಾವು

ಮಂಗಳೂರು(ಆನೇಕಲ್): ಬನ್ನೇರುಘಟ್ಟದ ಚಂಪಕಧಾಮ ಸ್ವಾಮಿ ಅಂಬಾರಿ ಹೊತ್ತಿದ್ದ ಆನೆಯನ್ನು ಸಾಗಿಸುತ್ತಿದ್ದ ಲಾರಿ ಹರಿದು ಚಾಲಕ ಸಾವನ್ನಪ್ಪಿರುವ ಘಟನೆ ರಾಜ್ಯದ ಗಡಿಭಾಗ ತಮಿಳುನಾಡಿನ ಸಾನಮಾವು ಬಳಿಯ ಹೊಸೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಚಾಲಕನನ್ನು ಆರೋಗ್ಯಸ್ವಾಮಿ(45) ಎಂದು ಗುರುತಿಸಲಾಗಿದೆ. ಚಾಲಕ ಹ್ಯಾಂಡ್ ಬ್ರೇಕ್ ಹಾಕದೆ ವಾಹನ ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ತೆರಳಿದ್ದಾಗ ಘಟನೆ ನಡೆದಿದೆ. ವಾಹನ ನಿಲ್ಲಿಸಿದ್ದ ಪ್ರದೇಶ ಇಳಿಜಾರಾಗಿದ್ದ ಕಾರಣ ವಾಹನ ಏಕಾಏಕಿ ಮುಂದಕ್ಕೆ ಚಲಿಸಿದ್ದು, ತಡೆಯಲು ಮುಂದಾದ ಚಾಲಕನ ಮೇಲೆ ಲಾರಿ ಹರಿದಿದ್ದೇ ಸಾವಿಗೆ ಕಾರಣವಾಗಿದೆ.‌ ವಾಹನದಲ್ಲಿದ್ದ ಇತರ ಆರು ಮಂದಿಯಿದ್ದು ಸಣ್ಣ ಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಹೊಸೂರಿನ ಅಡ್ಕೋ ಪೊಲೀಸರು ಹಾಗೂ ಅರಣ್ಯ ಸಿಬ್ಬಂದಿ ಧಾವಿಸಿದ್ದು, ಕ್ರೇನ್-ಜೆಸಿಬಿ ಮೂಲಕ ಲಾರಿಯನ್ನು ಮೇಲಕ್ಕೆ ಎತ್ತಲಾಗಿದೆ.

LEAVE A REPLY

Please enter your comment!
Please enter your name here