ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಬಿಡುಗಡೆ- ದ.ಕನ್ನಡದ ನಾಲ್ವರಿಗೆ ರಾಜ್ಯೋತ್ಸವ ಪ್ರಶಸ್ತಿ –

ಮಂಗಳೂರು: ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷ ತುಂಬಿದ್ದು, ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ 68 ಮಂದಿಯನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್‌ ಗೀತಾಬಾಯಿ 68ನೇ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ರಾಜ್ಯದ 68 ಮಂದಿಯ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದ್ದಾರೆ. ದ.ಕನ್ನಡದ ನಾಲ್ವರು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಯಕ್ಷಗಾನ/ಬಯಲಾಟ ಕ್ಷೇತ್ರದಿಂದ ಕೆ ಲೀಲಾವತಿ ಬೈಪಡಿತ್ತಾಯ, ಸಮಾಜನೇವಾ ಕ್ಷೇತ್ರದಿಂದ ಚಾರ್ಮಾಡಿ ಹಸನಬ್ಬ, ವೈದ್ಯಕೀಯ ಕ್ಷೇತ್ರದಿಂದ ಡಾ.ಪ್ರಶಾಂತ್‌ ಶೆಟ್ಟಿ, ಮಾದ್ಯಮ ಕ್ಷೇತ್ರದಿಂದ ದಿನೇಶ್‌ ಅಮೀನ್‌ ಮಟ್ಟು ಅವರು ದ.ಕ ಜಿಲ್ಲೆಯಿಂದ ಪ್ರಶಸ್ತಿಗಾಗಿ ಆಯ್ಕೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here