ಮಟ್ಕಾ ಅಡ್ಡೆಗೆ ಪೊಲೀಸ್ ದಾಳಿ-ನಾಲ್ವರ ಬಂಧನ-ನಗದು ವಶಕ್ಕೆ

ಮಂಗಳೂರು(ಉಳ್ಳಾಲ): ಉಳ್ಳಾಲ ಠಾಣಾ ವ್ಯಾಪ್ತಿಯ ಒಳಪೇಟೆಯಲ್ಲಿ ನಡೆಯುತ್ತಿದ್ದ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಇನ್ಸ್ಪೆಕ್ಟರ್ ಬಾಲಕೃಷ್ಣ ನೇತೃತ್ವದ ಪೊಲೀಸರ ತಂಡ ನಾಲ್ವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಬಂಧಿತರನ್ನು ಬೆಳ್ಮ ರೆಂಜಾಡಿ ನಿವಾಸಿ ಖಾದರ್ ಮೊಯ್ದಿನ್ (60), ಮೂಲತಃ ಬೆಳಗಾವಿ ನಿವಾಸಿ ಪ್ರಸ್ತುತ ತೊಕ್ಕೋಟ್ಟು ಒಳಪೇಟೆ ಬಳಿ ವಾಸವಿರುವ ಫಕೀರಬ್ಬ, ಮೂಲತಃ ಸಕಲೇಶಪುರ ನಿವಾಸಿ ಪ್ರಸ್ತುತ ಮಂಜನಾಡಿಯಲ್ಲಿ ವಾಸವಿರುವ ಮುಸ್ತಫಾ (52) ಹಾಗೂ ಉಳ್ಳಾಲ ಬೈಲ್ ನಿವಾಸಿ ಮಧುಸೂದನ್(50) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 3260ರೂ. ನಗದು ಹಾಗೂ ಇತರ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here