ಕಾರೊಂದು ಮೂರು ಬೈಕ್‌ಗಳಿಗೆ ಢಿಕ್ಕಿ-ನಾಲ್ವರಿಗೆ ಗಾಯ-ಕಾರು ಚಾಲಕ ಪರಾರಿ

ಮಂಗಳೂರು(ಬೆಂಗಳೂರು): ಕಾರೊಂದು ಮೂರು ಬೈಕ್‌ಗಳಿಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ನ.12ರಂದು ಬೆಂಗಳೂರಿನ ಹುಳಿಮಾವು ಪ್ರದೇಶದಲ್ಲಿ ನಡೆದಿದೆ.

ನಗರದ ಹುಳಿಮಾವು ಬಳಿಯ ಕಾಳೇನ ಅಗ್ರಹಾರದಲ್ಲಿ ಸಿಗ್ನಲ್‌ ಇದ್ದ ಕಾರಣ ವಾಹನಗಳು ನಿಂತಿದ್ದ ವೇಳೆ, ಹಿಂದಿನಿಂದ ಬಂದ ಎಸ್‌ಯುವಿ ಕಾರಿನ ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದೆ. ಕಾರು ಮೂರು ಬೈಕ್‌ಗಳಿಗೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರರು ಮತ್ತು ಹಿಂಬದಿ ಸವಾರರು ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ ನಾಲ್ವರು ಗಾಯಗೊಂಡಿದ್ದು, ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಘಟನೆ ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ವೀಡಿಯೊ ಮತ್ತೊಂದು ಕಾರಿನ ಡ್ಯಾಶ್ ಬೋರ್ಡ್‌ ನ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here