ಬಂಟ್ವಾಳದ ಯುವಕ ಧನೇಶ್‌ ಶೆಟ್ಟಿ – ಇಂಡೋನೇಷ್ಯಾ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ- ಹುಟ್ಟಿದೂರಿನಲ್ಲಿ ಸಂಭ್ರಮ

ಮಂಗಳೂರು (ಬಂಟ್ವಾಳ): ಮೂಲತಃ ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಧನೇಶ್ ಶೆಟ್ಟಿ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಧನೇಶ್ ಶೆಟ್ಟಿ ಕುಕ್ಕಿಪ್ಪಾಡಿ ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರರಾಗಿದ್ದಾರೆ. ಇಂಡೋನೇಷಿಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಇವರು ವಿವಾಹಿತರಾಗಿದ್ದು ಪತ್ನಿಯೊಂದಿಗೆ ಇಂಡೋನೇಷಿಯದ ಆರೋಗ್ಯ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ.

ಉತ್ತಮ ಕ್ರೀಡಾಪಟುವಾಗಿರುವ ಧನೇಶ್ ಅವರಿಗೆ ಕ್ರಿಕೆಟ್ ಎಂದರೆ ಅಚ್ಚುಮೆಚ್ಚು. ಇದೀಗ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದ್ದಿದ್ದು, ಊರಿನ ಜನರಲ್ಲಿ ಸಂಭ್ರಮ ಮನೆ ಮಾಡಿದೆ.

LEAVE A REPLY

Please enter your comment!
Please enter your name here