ಮಲಗಿದ್ದ ಕಾರ್ಮಿಕನ ಮೇಲೆ ಹರಿದ ಟಿಪ್ಪರ್‌ – ನಿದ್ರಾದೇವಿಯ ವಶದಲ್ಲಿರುವಾಗಲೇ ಉಸಿರು ಚೆಲ್ಲಿದ ಕಾರ್ಮಿಕ


ಮಂಗಳೂರು (ಉಡುಪಿ): ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಸೋಮೇಶ್ವರ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.
ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಶಿವಮೊಗ್ಗ ಮೂಲದ ಲಾರಿ ಕಾರ್ಮಿಕ ಶಿವರಾಜ್ ಎಂಬುವವರ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಮೃತಪಟ್ಟ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಟಿಪ್ಪರ್ ಚಾಲಕ ಪೆಟ್ರೋಲ್ ಹಾಕಿಸಿಕೊಂಡು ತೆರಳುವ ವೇಳೆ ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ಕಾರ್ಮಿಕನ ಮೇಲೆಯೇ ಚಾಲಕ ಟಿಪ್ಪರ್ ಹರಿಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಶಿವರಾಜ್ ನನ್ನು   ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಷ್ಟರಲ್ಲಿ ಆತ ಮೃತಪಟ್ಟಿದ್ದ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ  ಮುಂದಿನ ಕ್ರಮ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here