ಬಿಜೆಪಿ ಕಾರ್ಯಕರ್ತರಿಗೆ ನೆರವಾಗಲು‌ ಜಿಲ್ಲೆಗಳಲ್ಲಿ ಕಂಟ್ರೋಲ್ ರೂಂ-ಬಿ.ವೈ. ವಿಜಯೇಂದ್ರ

ಮಂಗಳೂರು(ಬೆಂಗಳೂರು): ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸುತ್ತಿರುವುದಕ್ಕೆ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಕಾರ್ಯಕರ್ತರ ನೆರವಿಗಾಗಿ 24 ಗಂಟೆ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಆರಂಭಿಸುವುದಾಗಿ ಹೇಳಿದ್ದಾರೆ.

ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ಶೀಘ್ರ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. ಸರ್ಕಾರದ ವಿರುದ್ಧ ದನಿಯೆತ್ತಲು ಕಾರ್ಯಕರ್ತರು ಹೆದರಬೇಕಿಲ್ಲ. ಪಕ್ಷ ನಿಮ್ಮ ಜತೆಗೆ ಇರಲಿದೆ ಎಂದು ವಿಜಯೇಂದ್ರ ಧೈರ್ಯ ತುಂಬಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ವಿಜಯೇಂದ್ರ, ಕಾರ್ಯಕರ್ತರ ನೆರವಿಗೆ ಶೀಘ್ರವೇ ಕಾನೂನು ನೆರವು‌ ನೀಡಲು ಕಂಟ್ರೋಲ್ ರೂಂ ತೆರೆಯುವುದಾಗಿ ಭರವಸೆ ನೀಡಿದ್ದಾರೆ.

 

LEAVE A REPLY

Please enter your comment!
Please enter your name here