ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರಾಗಿ ನ್ಯಾ. ಎಲ್. ನಾರಾಯಣಸ್ವಾಮಿ ನೇಮಕ

ಮಂಗಳೂರು(ಬೆಂಗಳೂರು): ರಾಜ್ಯ ಸರಕಾರ 8 ತಿಂಗಳ ಬಳಿಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡಿದೆ. ನಿವೃತ್ತ ನ್ಯಾ. ಎಲ್. ನಾರಾಯಣಸ್ವಾಮಿ ಅವರನ್ನು ಆಯೋಗಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ಸರಕಾರ ಅಧ್ಯಕ್ಷರ ಜತೆಗೆ ಇಬ್ಬರು ಸದಸ್ಯರನ್ನುಆಯ್ಕೆ ಮಾಡಿದ್ದು, ನಿವೃತ್ತ ಜಿಲ್ಲಾ ನ್ಯಾ. ಎಸ್. ಕೆ.ವಂಟಿಗೋಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶಾಮ್ ಭಟ್ ಅವರನ್ನು ಸದಸ್ಯರನ್ನಾಗಿ ನೇಮಿಸಿದೆ. ಎಲ್. ನಾರಾಯಣಸ್ವಾಮಿ ಹಿಮಾಚಲ ಪ್ರದೇಶ ಕೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ನಿವೃತ್ತರಾಗಿದ್ದರು. ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಸುಮಾರು 4,800ಕ್ಕೂ ಅಧಿಕ ಪ್ರಕರಣಗಳು ತನಿಖೆಯಾಗದೆ ಬಾಕಿ ಉಳಿದಿವೆ. ಈಗ ಅಧ್ಯಕ್ಷರ ನೇಮಕವಾಗಿದ್ದು ತನಿಖೆಗೆ ವೇಗ ಸಿಗಲಿದೆ.

 

LEAVE A REPLY

Please enter your comment!
Please enter your name here