ಸಾವು ಗೆದ್ದ ಕಾರ್ಮಿಕರ ಜೊತೆ ಪ್ರಧಾನಿ ಮಾತುಕತೆ-ಕಾರ್ಮಿಕರ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಮಂಗಳೂರು(ನವದೆಹಲಿ): ಸಿಲ್ಕ್ಯಾರಾ ಸುರಂಗದಲ್ಲಿ 17 ದಿನ ಸಿಲುಕಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ರಕ್ಷಣಾ ಪಡೆಗಳ ಕಾರ್ಯಾಚರಣೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಯಶಸ್ವಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಸಂತಸ ವ್ಯಕ್ತಪಡಿಸಿ ನ.28ರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ 41 ಕಾರ್ಮಿಕರ ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಉತ್ತರಕಾಶಿ ಜಿಲ್ಲಾಡಳಿತ ಕಾರ್ಮಿಕರಿಗೆ ಮೋದಿ ಜೊತೆ ಮಾತನಾಡಲು ಅಗತ್ಯ ಸೌಕರ್ಯ ಮಾಡಿತ್ತು. ಈ ಯಶಸ್ವಿ ಕಾರ್ಯಾಚರಣೆ ನಮ್ಮನ್ನೆಲ್ಲ ಭಾವುಕಗೊಳಿಸಿದೆ. 17 ದಿನ ಸುರಂಗದಲ್ಲಿ ಇದ್ದು ಬದುಕಿ ಬಂದ ನೀವು ಪ್ರತಿಯೊಬ್ಬರಿಗೂ ಪ್ರೇರಣದಾಯಕವಾಗುತ್ತೀರಿ. ಮುಂದಿನ ದಿನಗಳಲ್ಲಿ ನಿಮಗೆಲ್ಲ ಉತ್ತಮ ಆರೋಗ್ಯ ಸಿಗಲಿ ಎಂದು ಹಾರೈಸುತ್ತೇನೆ ಎಂದು ಮೋದಿ ದೂರವಾಣಿ ಸಂಭಾಷಣೆಯಲ್ಲಿ ಹೇಳಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here