ತಾನು ಚಲಾಯಿಸುತ್ತಿದ್ದ ಲಾರಿಯಡಿಗೆ ಸಿಲುಕಿ ಚಾಲಕ ಮೃತ್ಯು

ಮಂಗಳೂರು(ಕಾಸರಗೋಡು): ಲಾರಿಯಡಿಗೆ ಸಿಲುಕಿ ಚಾಲಕ ಮೃತ ಪಟ್ಟ ದಾರುಣ ಘಟನೆ (ಡಿ.9) ಇಂದು ಮಧ್ಯಾಹ್ನ ಬದಿಯಡ್ಕ ಸಮೀಪದ ನೀರ್ಚಾಲ್ ಗೋಳಿಯಡ್ಕ ಎಂಬಲ್ಲಿ ನಡೆದಿದೆ. ಪಾಡಿ ಉತ್ತರತ್ತೋಡಿಯ ಮುಹಮ್ಮದ್ ನೌಫಲ್ (23) ಮೃತಪಟ್ಟ ದುರ್ದೈವಿ.

ಲಾರಿಯನ್ನು ಸ್ಟಾರ್ಟ್ನಲ್ಲಿರಿಸಿ ಗೇಟ್ ತೆರೆಯಲು ಹೋದ ಸಂದರ್ಭದಲ್ಲಿ ಅದೇ ಲಾರಿ ಮುಂದಕ್ಕೆ ಸಂಚರಿಸಿ ಲಾರಿಯಡಿಗೆ ಸಿಲುಕಿ ಈ ದಾರುಣ ಘಟನೆ ನಡೆದಿದೆ. ಕೂಡಲೇ ಕುಂಬಳೆಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ಯಲಾಯಿತಾದರೂ ಪ್ರಯತ್ನ ಫಲಕಾರಿಯಾಗಲಿಲ್ಲ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

 

LEAVE A REPLY

Please enter your comment!
Please enter your name here