ಮಂಗಳೂರು(ಕೇರಳ): ಶಬರಿಮಲೆ ಮಣಿಕಂಠನ ದರ್ಶನಕ್ಕೆ ಅಯ್ಯಪ್ಪನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ದರ್ಶನದ ಅವಧಿಯನ್ನು ಒಂದು ತಾಸು ಹೆಚ್ಚಿಸುವ ತೀರ್ಮಾನವನ್ನು ತಿರುವಾಂಕೂರು ದೇವಸ್ಥಾನಂ ಮಂಡಳಿ ತೆಗೆದುಕೊಂಡಿದೆ.
ಇದುವರೆಗೆ ಸಂಜೆ 4ರಿಂದ ರಾತ್ರಿ 11 ಗಂಟೆಯ ವರೆಗೆ ದರ್ಶನಕ್ಕೆ ಅವಕಾಶ ಇತ್ತು, ಈಗ ಇದನ್ನು ಸಂಜೆ 3ರಿಂದಲೇ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಪಟ್ಟನಂತಿಟ್ಟ ಜಿಲ್ಲಾಡಳಿತ ತಿಳಿಸಿದೆ. ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಕಾಯುವ ಭಕ್ತರಿಗೆ ನೀರು, ಬಿಸ್ಕತ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ, ದಿನಕ್ಕೆ 75 ಸಾವಿರ ಭಕ್ತರಿಗೆ ಮಾತ್ರ ಅವಕಾಶ ನೀಡುವಂತೆ ಟಿಡಿಬಿಗೆ ಮನವಿ ಮಾಡಲಾಗಿದೆ