ರೀಲ್ಸ್ ಮಾಡುತ್ತಿದ್ದವರಿಗೆ ರೈಲು ಡಿಕ್ಕಿ-ಮೂರು ಸ್ನೇಹಿತರ ಸಾವು-ನದಿಗೆ ಹಾರಿ ಪ್ರಾಣ ಉಳಿಸಿಕೊಂಡ ಮತ್ತಿಬ್ಬರು

ಮಂಗಳೂರು(ಪಶ್ಚಿಮ ಬಂಗಾಳ): ಸೋಷಿಯಲ್ ಮೀಡಿಯಾಕ್ಕಾಗಿ ರೀಲ್ಸ್ ಮಾಡುವ ವೇಳೆ ಯುವಕರಿಗೆ ರೈಲು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ನದಿಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದ ಮಾಲ್ಡಾದ ಸ್ಥಳೀಯ ರೈಲು ನಿಲ್ದಾಣಗಳ ನಡುವೆ ಈ ಘಟನೆ ನಡೆದಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ರೈಲ್ವೆ ಸೇತುವೆಯ ಮೇಲೆ ರೀಲ್ಸ್ ಮಾಡುತ್ತಿದ್ದಾಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಮೃತರ ಸ್ನೇಹಿತರಿಬ್ಬರು ಕೊನೆಯ ಕ್ಷಣದಲ್ಲಿ ನದಿಗೆ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here