ಸಂಸತ್‌ ಭದ್ರತಾ ಲೋಪ-ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಹೇಳಿಕೆಗೆ ಒತ್ತಾಯ-ಡಿ.ಕೆ.ಸುರೇಶ್‌ ಸೇರಿ ಮತ್ತೆ ಮೂವರು ಸಂಸದರು ಲೋಕಸಭೆಯಿಂದ ಅಮಾನತು

ಮಂಗಳೂರು(ನವದೆಹಲಿ): ವಿಪಕ್ಷಗಳ ಸಂಸದರ ಅಮಾನತು ಮುಂದುವರಿದಿದೆ. ಇಂದು ಕೂಡ ಕಾಂಗ್ರೆಸ್‌ನ ಡಿ.ಕೆ.ಸುರೇಶ್‌ ಸೇರಿದಂತೆ ಮೂವರು ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ.

ಸಂಸದ ಡಿ.ಕೆ.ಸುರೇಶ್‌, ನಕುಲ್ ನಾಥ್ ಮತ್ತು ದೀಪಕ್ ಬೈಜ್ ಅವರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ. ಇಲ್ಲಿವರೆಗೆ ಅಮಾನತುಗೊಂಡ ಸಂಸದರ ಸಂಖ್ಯೆ 146 ಕ್ಕೆ ಏರಿಕೆಯಾಗಿದೆ. ಸಂಸತ್‌ ಭದ್ರತಾ ಲೋಪ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಬೇಕು ಎಂದು ಆಗ್ರಹಿಸಿ ವಿಪಕ್ಷಗಳ ಸಂಸದರು ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಲಾಪಕ್ಕೆ ಅಡ್ಡಿಪಡಿಸಿದ್ದಾರೆಂದು ಹಲವು ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿತ್ತು.

 

LEAVE A REPLY

Please enter your comment!
Please enter your name here