ಹೆಚ್ಚುತ್ತಿರುವ ಮಹಾಮಾರಿ ಕೋವಿಡ್-ಇಂದು ಸಂಪುಟ ಉಪಸಮಿತಿ ಸಭೆ

ಮಂಗಳೂರು(ಬೆಂಗಳೂರು): ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ನಿರ್ವಹಣೆಗೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಶಿಫಾರಸುಗಳ ಕುರಿತು ಚರ್ಚಿಸಲು ರಾಜ್ಯ ಸರಕಾರದ ಸಚಿವ ಸಂಪುಟ ಉಪ ಸಮಿತಿ ಸಭೆ ಇಂದು ನಡೆಯಲಿದೆ.

ರಾಜ್ಯದಲ್ಲಿ ಡಿ.25ರಂದು 125 ಜನರಲ್ಲಿ ಕೊರೋನಾ ರೂಪಾಂತರಿ ತಳಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿನಿಂದ ಹಾಸನ, ದಕ್ಷಿಣ ಕನ್ನಡ ಮತ್ತು ಬೆಂಗಳೂರು ನಗರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸದ್ಯ 436 ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ 400 ಮಂದಿ ಗೃಹ ಆರೈಕೆಯಲ್ಲಿದ್ದಾರೆ. 36 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಜನ ಐಸಿಯು ಹಾಗೂ 29 ಜನ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ನಗರದಲ್ಲಿ 94, ಮೈಸೂರಿನಲ್ಲಿ 13, ದಕ್ಷಿಣ ಕನ್ನಡ ಮತ್ತು ಹಾಸನದಲ್ಲಿ ತಲಾ 5, ವಿಜಯನಗರ ಮತ್ತು ಶಿವಮೊಗ್ಗದಲ್ಲಿ ತಲಾ 2 ಹಾಗೂ ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗದಲ್ಲಿ ತಲಾ ಒಂದು ಪ್ರಕರಣಗಳು ವರದಿಯಾಗಿವೆ.

 

 

LEAVE A REPLY

Please enter your comment!
Please enter your name here