‌ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಹೆಚ್ಚಿದ ಆಕ್ರೋಶ-ಸಮಗ್ರ ಮಹಿಳೆಯರಿಗೆ ಮಾಡಿದ ಅವಮಾನ ಎಂದ ನಾಯಕರು-ಬಂಧನಕ್ಕೆ ಸಮಾನ ಮನಸ್ಕರ ಸಂಘಟನೆಗಳ ಆಗ್ರಹ

ಮಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳ ಬಗ್ಗೆ ಸಂಘಪರಿವಾರದ ಮುಖಂಡ ಪ್ರಭಾಕರ್ ಭಟ್ ನೀಡಿರುವ ಹೇಳಿಕೆ ಖಂಡನೀಯ. ಹೆಣ್ಣು ಮಕ್ಕಳಿರುವ ಯಾವುದೇ ಜಾತಿ ಧರ್ಮದವರು ಇದನ್ನ ಒಪ್ಪಲು ಸಾಧ್ಯವಿಲ್ಲ ಎಂದು ಸಮಾನ ಮನಸ್ಕರ ಸಂಘಟನೆಗಳು ಹೇಳಿದೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್‌, ಸಿಪಿಐಎಂ, ದಸಂಸ, ರೈತ ಸಂಘ ಸೇರಿದಂತೆ ಸಮಾನ ಮನಸ್ಕರ ಸಂಘಟನೆಗಳ ಮುಖಂಡರು ಪ್ರಭಾಕರ್ ಭಟ್ ಹೇಳಿಕೆ ಸಮಗ್ರ ಮಹಿಳೆಯರಿಗೆ ಮಾಡಿದ ಅವಮಾನ. ಮಹಿಳೆಯರ ಮನಸ್ಸಿಗೆ ನೋವಾಗುವ ಆತನ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಮಾಜಿ ಶಾಸಕ ರಮಾನಾಥ್ ರೈ ಹೇಳಿದ್ದಾರೆ. ಪ್ರಭಾಕರ್ ಭಟ್ ಅನೇಕ ಬಾರಿ ಪ್ರಚೋದನಾಕಾರಿ ಮಾತುಗಳನ್ನಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡ ಬಳಿಕ, ಇಂತಹ ಕೋಮುವಾದಿಗಳು ಏನು ಮಾಡಬೇಕೆಂದು ತಿಳಿಯದಂತಾಗಿದ್ದಾರೆ. ಹಾಗಾಗಿ, ಕೋಮು ಪ್ರಚೋದನೆ ಮಾಡುವ ಭಾಷಣ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆತನನ್ನು ಬಂಧಿಸಬೇಕೆಂದು ಎಲ್ಲೆಡೆ ಒತ್ತಡಗಳಿವೆ. ತಡಮಾಡದೆ ಆತನನ್ನು ಬಂಧಿಸಬೇಕು. ಆತನ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಹಿಂದೂಗಳ ಹೆಣ್ಣು ಮಕ್ಕಳ ಡ್ರೆಸ್ ಕೋಡ್ ಅನ್ನು ಅಪಮಾನಿಸುವ ಕೆಲಸವನ್ನೂ ಪ್ರಭಾಕರ್ ಭಟ್ ಮಾಡಿದ್ದಾರೆ. ಎಲ್ಲ ಭಾಷೆ, ಸಮುದಾಯ, ಧರ್ಮದ ಜನರು ಆತನ ಬಂಧನಕ್ಕೆ ಆಗ್ರಹಿಸುತ್ತಿದ್ದಾರೆ” ಎಂದು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ರಮಾನಾಥ ರೈ ಡಿವೈ ಎಫ್‌ ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, ಎಂಜಿ ಹೆಗ್ಗಡೆ‌, ಶಾಹುಲ್‌ ಹಮೀದ್, ದಿನೇಶ್‌ ಉಳಿಪ್ಪಾಡಿ, ಸಂತೋಷ್‌ ಕುಮಾರ್‌ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here