ಮಂಗಳೂರು ಮಹಾ ನಗರ ಪಾಲಿಕೆಯ ಬೋಳೂರು ವಾರ್ಡ್‌ ನ ಕಾರ್ಪೋರೇಟರ್ ಜಗದೀಶ್‌ ಶೆಟ್ಟಿ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು – ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ

ಮಂಗಳೂರು: ಮಂಗಳೂರು ಮಹಾ ನಗರ ಪಾಲಿಕೆಯ ಬೋಳೂರು ವಾರ್ಡ್‌ ನ ಕಾರ್ಪೋರೇಟರ್ ಜಗದೀಶ್‌ ಶೆಟ್ಟಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಮಂಗಳೂರಿನ ಹೋಟೇಲೊಂದರ ಮುಂಭಾಗದಲ್ಲಿ ಕಾರಿನಲ್ಲಿ ಕುಳಿತು ಜಗದೀಶ್‌ ಶೆಟ್ಟಿ ವಿಷ ಸೇವನೆ ಮಾಡಿದ್ದಾರೆ. ವಿಷ ಸೇವಿಸಿದ ಕೆಲವೇ ಕ್ಷಣದಲ್ಲಿ  ಒದ್ದಾಡಲು ಶುರು ಮಾಡಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ಅವರನ್ನು ಕಾರಿನಿಂದ ಹೊರತೆಗೆದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.  ಗಂಭೀರ ಸ್ಥಿತಿಯಲ್ಲಿರುವ ಅವರಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷ ಸೇವನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here