ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ-ದಕ್ಷಿಣ ಕನ್ನಡ ಜಿಲ್ಲೆಗೆ ಸತೀಶ್ ಕುಂಪಲ, ಉಡುಪಿಗೆ ಕಿಶೋರ್ ಕುಂದಾಪುರ

ಮಂಗಳೂರು(ಬೆಂಗಳೂರು): ಕರ್ನಾಟಕ ರಾಜ್ಯ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕರಾಗಿ ಎಸ್. ದತ್ತಾತ್ರಿ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯ ಕಾರ್ಯಾಲಯ ಕಾರ್ಯದರ್ಶಿಯಾಗಿ ಲೋಕೇಶ್ ಅಂಬೆಕಲ್ಲು, ಸಹ ಕಾರ್ಯದರ್ಶಿಯಾಗಿ ಬಿ.ಹೆಚ್. ವಿಶ್ವನಾಥ್ ನೇಮಕಗೊಂಡಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷರ ಪಟ್ಟಿ:

ದಕ್ಷಿಣ ಕನ್ನಡ- ಸತೀಶ್ ಕುಂಪಲ, ಉಡುಪಿ- ಕಿಶೋರ್ ಕುಂದಾಪುರ, ಮೈಸೂರು ನಗರ- ಎಲ್. ನಾಗೇಂದ್ರ, ಮೈಸೂರು ಗ್ರಾಮಾಂತರ- ಎಲ್.ಆರ್. ಮಹದೇವಸ್ವಾಮಿ, ಚಾಮರಾಜನಗರ- ಸಿ.ಎಸ್. ನಿರಂಜನ್ ಕುಮಾರ್, ಹಾಸನ- ಸಿದ್ದೇಶ್ ನಾಗೇಂದ್ರ, ಕೊಡಗು- ರವಿ ಕಾಳಪ್ಪ, ಚಿಕ್ಕಮಗಳೂರು- ದೇವರಾಜ ಶೆಟ್ಟಿ, ಮಂಡ್ಯ- ಇಂದ್ರೇಶ್ ಕುಮಾರ್, ಶಿವಮೊಗ್ಗ- ಟಿ.ಡಿ. ಮೇಘರಾಜ್, ಉತ್ತರ ಕನ್ನಡ- ಎನ್.ಎಸ್. ಹೆಗಡೆ, ಹಾವೇರಿ- ಅರುಣ್ ಕುಮಾರ್ ಪೂಜಾರ, ಹುಬ್ಬಳ್ಳಿ- ಧಾರವಾಡ- ತಿಪ್ಪಣ್ಣ ಮಜ್ಜಗಿ, ಧಾರವಾಡ ಗ್ರಾಮಾಂತರ- ನಿಂಗಪ್ಪ ಸುತ್ತಗಟ್ಟಿ, ಗದಗ- ರಾಜು ಕುರಡಗಿ, ಬೆಳಗಾವಿ ನಗರ- ಗೀತಾ ಸುತಾರ್, ಬೆಳಗಾವಿ ಗ್ರಾಮಾಂತರ- ಸುಭಾಷ್ ಪಾಟೀಲ್, ಚಿಕ್ಕೋಡಿ- ಸತೀಶ್ ಅಪ್ಪಾಜಿಗೋಳ್, ಬಾಗಲಕೋಟೆ- ಶಾಂತಗೌಡ ಪಾಟೀಲ್, ವಿಜಯಪುರ- ಆರ್.ಎಸ್. ಪಾಟೀಲ್, ಬೀದರ್- ಸೋಮನಾಥ‌ ಪಾಟೀಲ್, ಕಲಬುರಗಿ ನಗರ- ಚಂದ್ರಕಾಂತ ಪಾಟೀಲ್, ಕಲಬುರಗಿ ಗ್ರಾಮಾಂತರ- ಶಿವರಾಜ ಪಾಟೀಲ್ ರದ್ದೇವಾಡಿ, ಯಾದಗಿರಿ- ಅಮೀನ್ ರೆಡ್ಡಿ, ರಾಯಚೂರು- ಡಾ. ಶಿವರಾಜ ಪಾಟೀಲ್, ಕೊಪ್ಪಳ- ನವೀನ್ ಗುಳಗಣ್ಣನವರ್, ಬಳ್ಳಾರಿ- ಅನಿಲ್ ಕುಮಾರ್ ಮೋಕಾ, ವಿಜಯನಗರ- ಚನ್ನಬಸವನಗೌಡ ಪಾಟೀಲ್, ದಾವಣಗೆರೆ- ರಾಜಶೇಖರ್, ಚಿತ್ರದುರ್ಗ- ಎ. ಮುರಳಿ, ತುಮಕೂರು – ಹೆಚ್.ಎಸ್. ರವಿಶಂಕರ್, ಮಧುಗಿರಿ- ಬಿ.ಸಿ. ಹನುಮಂತೇಗೌಡ, ರಾಮನಗರ- ಆನಂದಸ್ವಾಮಿ, ಬೆಂಗಳೂರು ಗ್ರಾಮಾಂತರ- ರಾಮಕೃಷ್ಣಪ್ಪ, ಚಿಕ್ಕಬಳ್ಳಾಪುರ-ರಾಮಲಿಂಗಪ್ಪ, ಕೋಲಾರ- ಡಾ. ಕೆ.ಎನ್. ವೇಣುಗೋಪಾಲ್, ಬೆಂಗಳೂರು ಉತ್ತರ- ಎಸ್. ಹರೀಶ್, ಬೆಂಗಳೂರು ಕೇಂದ್ರ- ಸಪ್ತಗಿರಿಗೌಡ, ಬೆಂಗಳೂರು ದಕ್ಷಿಣ- ಸಿ.ಕೆ. ರಾಮಮೂರ್ತಿ.

LEAVE A REPLY

Please enter your comment!
Please enter your name here