ಭಜರಂಗದಳದ ಖಚಿತ ಮಾಹಿತಿ ಮೇರೆಗೆ ಕಸಾಯಿಖಾನೆಗೆ ಪೊಲೀಸ್‌ ದಾಳಿ- ಇಬ್ಬರ ಬಂಧನ

ಮಂಗಳೂರು(ಕಲ್ಲಡ್ಕ): ಭಜರಂಗದಳ ಕಲ್ಲಡ್ಕ ಪ್ರಖಂಡದ ಖಚಿತ ಮಾಹಿತಿ ಮೇರೆಗೆ ಗೋ ಮಾಂಸ ಸಾಗಟದ ಆರೋಪಿಗಳನ್ನು ಮತ್ತು ಗೋಮಾಂಸವನ್ನು ಬಿ.ಸಿ ರೋಡ್ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಭಜರಂಗದಳ ಕಲ್ಲಡ್ಕ ಪ್ರಖಂಡದ ಖಚಿತ ಮಾಹಿತಿ ಮೇರೆಗೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, 1 ಆಟೋ ರಿಕ್ಷಾ ಮತ್ತು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸೆರೆ ಸಿಕ್ಕ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕಾಗಿ ವಿಶ್ವ ಹಿಂದೂ ಪರಿಷತ್ ಕಲ್ಲಡ್ಕ ಪ್ರಖಂಡದ ಕಾರ್ಯದರ್ಶಿ ಲೋಹಿತ್ ಪಣೋಲಿಬೈಲ್ ಆಗ್ರಹಿದ್ದಾರೆ.

 

 

LEAVE A REPLY

Please enter your comment!
Please enter your name here