ಬೆಂಗಳೂರಿನಲ್ಲಿ ಡಬಲ್ ಮರ್ಡರ್-ಚಾಕುವಿನಿಂದ ಇರಿದು ಹತ್ಯೆ ಮಾಡಿದ ಸಂಬಂಧಿ

ಮಂಗಳೂರು(ಬೆಂಗಳೂರು): ಬೆಂಗಳೂರಿನಲ್ಲಿ ಡಬಲ್ ಮರ್ಡರ್ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ನಿನ್ನೆ (ಫೆ.7) ರಾತ್ರಿ ಕುಂಬಾರಪೇಟೆಯ ಹರಿ ಮಾರ್ಕೆಟಿಂಗ್​ನ ಒಳಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಇಬ್ಬರನ್ನು ಬರ್ಬರ ಹತ್ಯೆ ಮಾಡಿದ್ದಾರೆ. ಸುರೇಶ್ (55) ಹಾಗೂ ಮಹೇಂದ್ರ (68) ಹತ್ಯೆಯಾದ ವ್ಯಕ್ತಿಗಳು.

ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿದ್ದು, ಸಂಬಂಧಿ ಭದ್ರ ಎಂಬಾತ ಚಾಕುವಿನಿಂದ ಇರಿದು, ಬರ್ಬರವಾಗಿ ಹತ್ಯೆಗೈದಿದ್ದಾನೆ. ಬಳಿಕ ತಾನೇ ಪೊಲೀಸರಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಕುರಿತು ಮಾತನಾಡಿದ ಕೇಂದ್ರ ವಿಭಾಗ ಡಿಸಿಪಿ ಶೇಖರ್ ತೆಕ್ಕಣ್ಣನವರ್, ‘ಘಟನೆ ಕುರಿತು ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದೀವಿ. ಮೃತ ಸುರೇಶ್ ಮತ್ತು ಮಹೇಂದ್ರ ಇಬ್ಬರು ಅಡುಗೆ ಉಪಕರಣಗಳನ್ನು ಮಾರಾಟ ಮಾಡುತ್ತಿದ್ದರು. ಮೇಲ್ನೋಟಕ್ಕೆ ಆಸ್ತಿ ವಿಚಾರಕ್ಕೆ ನಡೆದ ಕೊಲೆ ಎನ್ನಲಾಗುತ್ತಿದೆ. ಈ ಕುರಿತು ತನಿಖೆ ನಡೆಸಿದ ಬಳಿಕ ಕೃತ್ಯಕ್ಕೆ ನಿಖರವಾದ ಕಾರಣ ತಿಳಿಸಲಾಗುವುದು’ ಎಂದಿದ್ದಾರೆ.

LEAVE A REPLY

Please enter your comment!
Please enter your name here