ಅಳಿಯನಿಗೆ ಅನೈತಿಕ ಸಂಬಂಧ-ಬಿಯರ್‌ ಕುಡಿಸಿ ಚಾಕುವಿನಿಂದ ಇರಿದು ಕೊಂದ ಮಾವ

ಮಂಗಳೂರು(ಹಾವೇರಿ): ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಅಳಿಯನನ್ನೇ ಮಾವ ಕೊಲೆ ಮಾಡಿದ್ದಾನೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಘಟನೆ ನಡೆದಿದೆ. ಸಲೀಂ ದಾದಾಫೀರ್ ಒಲೆಕಾರ್ (29) ಕೊಲೆಯಾದ ವ್ಯಕ್ತಿ.

ಹೈದರ ಚಮನಸಾಬ್ ಹಲಗೇರಿ ಎಂಬುವವನು ಕೊಲೆ ಆರೋಪಿ ಆಗಿದ್ದಾನೆ. ನಗರದ ಹೊರವಲಯಕ್ಕೆ ಸಲೀಂ ಕರೆದು ಹೋದ ಹೈದರ್‌ ಚೆನ್ನಾಗಿ ಬಿಯರ್ ಕುಡಿಸಿದ್ದಾನೆ. ನಂತರ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.ಕೊಲೆ ಮಾಡಿ ಗದಗ-ಹೊನ್ನಾಳಿ ಹೆದ್ದಾರಿ ಪಕ್ಕದಲ್ಲಿ ಶವ ಎಸೆದು ಹೋಗಿದ್ದರು. ಆರೋಪಿ ಹಾಗೂ ಕೊಲೆಯಾದ ವ್ಯಕ್ತಿ ಇಬ್ಬರು ಮಾಗೋಡ ಗ್ರಾಮದವರು ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

LEAVE A REPLY

Please enter your comment!
Please enter your name here