‘ನಾರಿ ನ್ಯಾಯ ಗ್ಯಾರಂಟಿ’ ಯೋಜನೆ ಅಡಿಯಲ್ಲಿ ಕಾಂಗ್ರೆಸ್ ಐದು ಭರವಸೆ-ಬಡ ಕುಟುಂಬದ ಮಹಿಳೆಯರಿಗೆ ವಾರ್ಷಿಕ ₹1 ಲಕ್ಷ ಸಹಾಯ-ಕಾಂಗ್ರೆಸ್ ಘೋಷಣೆ

ಮಂಗಳೂರು(ನವದೆಹಲಿ): ಬಡ ಕುಟುಂಬದ ಮಹಿಳೆಯರಿಗೆ ವಾರ್ಷಿಕವಾಗಿ ₹1 ಲಕ್ಷ ಆರ್ಥಿಕ ಸಹಾಯ ಮತ್ತು ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡುವುದಾಗಿ ಕಾಂಗ್ರೆಸ್ ಇಂದು (ಮಾ.13) ಘೋಷಿಸಿದೆ.

‘ನಾರಿ ನ್ಯಾಯ ಗ್ಯಾರಂಟಿ’ ಯೋಜನೆ ಅಡಿಯಲ್ಲಿ ಕಾಂಗ್ರೆಸ್ ಐದು ಭರವಸೆಗಳನ್ನು ನೀಡಿದೆ. ‘ಮಹಾಲಕ್ಷ್ಮಿ’, ‘ಆದಿ ಅಬಾದಿ-ಪುರ ಹಕ್’, ‘ಶಕ್ತಿ ಕಾ ಸಮ್ಮಾನ್’, ‘ಅಧಿಕಾರ ಮೈತ್ರಿ’ ಮತ್ತು ‘ಸಾವಿತ್ರಿಬಾಯಿ ಫುಲೆ ಹಾಸ್ಟೆಲ್‌’ಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿದೆ. ನವದೆಹಲಿಯಲ್ಲಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರದ ಧುಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ನ್ಯಾಯ್ ಯಾತ್ರೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಘೋಷಣೆ ಮಾಡಿದ್ದಾರೆ.

ಮಹಿಳಾ ಮೇಳವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಳೆದ 10 ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರವಧಿಯಲ್ಲಿ ಮಹಿಳೆಯರಿಗೆ ಏನೂ ಸಿಕ್ಕಿಲ್ಲ. ಬೆಲೆ ಏರಿಕೆ, ನಿರುದ್ಯೋಗದಿಂದಾಗಿ ಮಹಿಳೆಯರು ಹೆಚ್ಚು ತೊಂದರೆ ಅನುಭವಿಸಿದ್ದಾರೆ ಎಂದು ಹೇಳಿದ್ದಾರೆ. ಮಹಾಲಕ್ಷ್ಮಿ ಯೋಜನೆಯಡಿ ಬಡ ಕುಟುಂಬದ ಮಹಿಳೆಯರಿಗೆ ವರ್ಷಕ್ಕೆ ₹1 ಲಕ್ಷ ಆರ್ಥಿಕ ಸಹಾಯ, ಆದಿ ಆಬಾದಿ-ಪುರ ಹಕ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಹೊಸ ನೇಮಕಾತಿಗಳಲ್ಲಿ ಮಹಿಳೆಯರು ಶೇ 50ರಷ್ಟು ಮೀಸಲಾತಿ ನೀಡಲಾಗುವುದು ಎಂದು ರಾಹುಲ್ ವಿವರಿಸಿದ್ದಾರೆ. ‘ಶಕ್ತಿ ಕಾ ಸಮ್ಮಾನ್’ ಅಡಿಯಲ್ಲಿ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನಕ್ಕೆ ಕೇಂದ್ರ ಸರ್ಕಾರದ ಕೊಡುಗೆಯನ್ನು ದ್ವಿಗುಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ‘ಅಧಿಕಾರ ಮೈತ್ರಿ’ ಅಡಿಯಲ್ಲಿ ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅಗತ್ಯ ಸಹಾಯವನ್ನು ಒದಗಿಸಲು ಪ್ರತಿ ಪಂಚಾಯತಿಯಲ್ಲಿ ಒಬ್ಬ ಕಾನೂನು ಸಹಾಯಕರನ್ನು ಅಧಿಕಾರ ಮೈತ್ರಿ ರೂಪದಲ್ಲಿ ನೇಮಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಕೇಂದ್ರವು ದೇಶದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕನಿಷ್ಠ ಒಂದು ಉದ್ಯೋಗಿ ಮಹಿಳಾ ಹಾಸ್ಟೆಲ್ ಅನ್ನು ರಚಿಸುತ್ತದೆ ಮತ್ತು ಈ ಹಾಸ್ಟೆಲ್‌ಗಳ ಸಂಖ್ಯೆಯನ್ನು ದೇಶದಾದ್ಯಂತ ದ್ವಿಗುಣಗೊಳಿಸಲಾಗುವುದು ಎಂದು ರಾಹುಲ್ ಆಶ್ವಾಸನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here