ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟ – 6 ಮಂದಿಗೆ ಗಾಯ – ಓರ್ವನ ಸ್ಥಿತಿ ಗಂಭೀರ

ಮಂಗಳೂರು (ಬಳ್ಳಾರಿ): ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಗುರುವಾರ(ಎ.2) ಸಂಜೆ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿದೆ.

ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್‌ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡಿದ್ದು, ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್‌ ಎಂಬವರಿಗೆ ಗಂಭೀರ ಗಾಯವಾಗಿದೆ. ಮೂವರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ನಗರದ ವಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ್ಯುವೆಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲ್ ಎಸಿಯಲ್ಲಿ ಗ್ಯಾಸ್ ಖಾಲಿಯಾಗಿತ್ತು. ಗ್ಯಾಸ್ ಭರ್ತಿ ಮಾಡಲು ಇಬ್ಬರು ಕಾರ್ಮಿಕರು ಮಳಿಗೆಗೆ ಬಂದಿದ್ದರು. ಎಸಿಗೆ ಗ್ಯಾಸ್ ತುಂಬಿಸುವಾಗ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ‌ದ್ದಾರೆ. ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿಡಿಯೋ ವೈರಲ್ ಆಗಿದ್ದು, ಘಟನೆಯಿಂದ ಅಂಗಡಿ ಮತ್ತು ಸುತ್ತಮುತ್ತಲಿನ ಗಾಜಿನ ಕಿಟಕಿಗಳು ಒಡೆದು ಹೋಗಿದೆ. ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಲ್ಯಾಣ್‌ ಜ್ಯುವೆಲರ್ಸ್‌, ಅಂಗಡಿಯ ಸಿಬ್ಬಂದಿ ಸೇರಿ ಇತರರು ಗಾಯಗೊಂಡಿದ್ದು, ಶೀಘ್ರ ಚೇತರಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಬೆಂಬಲವನ್ನು ನಾವು ನೀಡುತ್ತೇವೆ ಎಂದು ಹೇಳಿಕೆ ಬಿಡುಗಡೆ ಮಾಡಿದೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here