



ಮಂಗಳೂರು(ರಾಮನಗರ): ಈಜಲು ತೆರಳಿದ್ದ ಮೂವರು ಶಾಲಾ ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ರಾಮನಗರದ ಅಚಲು ಗ್ರಾಮದ ಬೆಟ್ಟದ ಸಮೀಪ ಸಂಭವಿಸಿದೆ. ಮೃತರನ್ನು ಸಬಾದ್ (14), ಸುಲ್ತಾನ್ (13) ಮತ್ತು ರಿಯಾಜ್ ಖಾನ್ (15) ಎಂದು ಗುರುತಿಸಲಾಗಿದ್ದು, ಇವರು ರಾಮನಗರದ ಮೆಹಬೂಬ್ ನಗರದ ನಿವಾಸಿಗಳಾಗಿದ್ದಾರೆ.



![]()



ಶಾಲೆಗೆ ರಜೆ ಇದ್ದ ಕಾರಣ 8 ಮಂದಿ ವಿದ್ಯಾರ್ಥಿಗಳು ಅಚ್ಚಲು ಗ್ರಾಮದ ಬಳಿಯ ಬೆಟ್ಟಕ್ಕೆ ಬಂದಿದ್ದಾರೆ. ಈ ಬೆಟ್ಟದಲ್ಲಿ ಸುಮಾರು 10 ಅಡಿ ಆಳದ ನೀರಿನ ಹೊಂಡ ಇದ್ದು, ಇದರಲ್ಲಿ ಮೂವರು ವಿದ್ಯಾರ್ಥಿಗಳು ಈಜಲು ಇಳಿದಿದ್ದಾರೆ. ಈ ಸಂದರ್ಭದಲ್ಲಿ ಈಜು ಬಾರದೇ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರ ಶವವನ್ನು ಅಗ್ನಿಶಾಮಕ ಸಿಬ್ಬಂದಿಗಳು ನೀರಿನಿಂದ ಹೊರಕ್ಕೆ ತೆಗೆದಿದ್ದಾರೆ. ರಾಮನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














