ಬೈಕ್ ಗೆ ಡಿಕ್ಕಿ ಹೊಡೆದು ಆಟೋ ಪಲ್ಟಿ-ಆಟೋ ಪ್ರಯಾಣಿಕ ಸಾವು-ಅಪಾಯದಿಂದ ಪಾರಾದ ಬೈಕ್ ಸವಾರರು

ಮಂಗಳೂರು(ಬಂಟ್ವಾಳ): ಪಾಣೆಮಂಗಳೂರು ಕೆನರಾ ಬ್ಯಾಂಕ್ ಮುಂಭಾಗ ಮಿತಿಮೀರಿದ ವೇಗದಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದು ಆಟೋ ಪಲ್ಟಿಯಾಗಿದೆ. ಘಟನೆಯಲ್ಲಿ ಆಟೋದಲ್ಲಿದ್ದ ಪ್ರಯಾಣಿಕ ಸಜಿಪ ಕಂಚಿನಡ್ಕ ಪದವು ನಿವಾಸಿ ಅಲ್ತಾಫ್(20) ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಅಲ್ತಾಫ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರು ಕೆಲ ಕ್ಷಣದಲ್ಲೇ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರರ ಪ್ರಾಣ ಉಳಿಸುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಆಟೋ ರಸ್ತೆಯಲ್ಲೇ ಪಲ್ಟಿಹೊಡೆದು ಪ್ರಯಾಣಿಕ ಅಲ್ತಾಫ್ ಮೃತಪಟ್ಟಿದ್ದಾರೆ. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here