ಮಹಿಳೆ ಜತೆ ಪೊಲೀಸ್ ಕಾನ್ಸ್ಟೆಬಲ್ ಆತ್ಮಹತ್ಯೆ-ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮಂಗಳೂರು(ಹುಬ್ಬಳ್ಳಿ): ಪೊಲೀಸ್ ಪೇದೆಯೊಬ್ಬರು ಮಹಿಳೆ ಜತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರದ ಶಿವಾನಂದನಗರದಲ್ಲಿ ನಡೆದಿದೆ.

ಮಹೇಶ್ ಹೆಸರೂರ್ (31), ವಿಜಯಲಕ್ಷ್ಮೀ ವಾಲಿ (30) ಆತ್ಮಹತ್ಯೆ ಮಾಡಿಕೊಂಡವರು. ಮೃತ ಮಹೇಶ್ ಹೆಸರೂರ್ ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ನಿವಾಸಿಯಾಗಿದ್ದು ಧಾರವಾಡದಲ್ಲಿ ಟ್ರಾಫಿಕ್ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಮೃತ ಮಹಿಳೆ ಚಿಕ್ಕ ಹೋಟೆಲ್ ಇಟ್ಟುಕೊಂಡು ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಈಕೆಗೂ ಪೊಲೀಸ್ ಪೇದೆಗೂ ಸಂಬಂಧವಿತ್ತು ಎನ್ನಲಾಗಿದೆ. ಪೊಲೀಸ್ ಪೇದೆ ವಿವಾಹಿತನಾಗಿದ್ದು, ಹೊಂದಾಣಿಕೆ ಆಗಿರಲಿಲ್ಲ. ಹೀಗಾಗಿ ಮೃತ ವಿಜಯಲಕ್ಷ್ಮಿಯೊಂದಿಗೆ ಸಂಬಂಧ ಹೊಂದಿದ್ದ ಎನ್ನಲಾಗಿದೆ.

ಕಳೆದ ಒಂದು ವರ್ಷದ ಹಿಂದಷ್ಟೇ ಬಾಡಿಗೆ ಮನೆಗೆ ಬಂದಿದ್ದ ಕಾನ್ಸ್‌ಟೇಬಲ್ ಮೃತ ಮಹಿಳೆಯೊಂದಿಗೆ ಪರಿಚಯವಾಗಿ ಸಂಬಂಧ ಹೊಂದಿದ್ದ. ಆದರೆ ಯಾವ ಕಾರಣಕ್ಕೆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬು ಗೊತ್ತಾಗಿಲ್ಲ. ಇಬ್ಬರ ಮೃತದೇಹಗಳೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದೂ ತಿಳಿದುಬಂದಿಲ್ಲ. ನವನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here