ಮಲಗಿದ್ದಲ್ಲಿಯೇ ಒಂದೇ ಕುಟುಂಬದ ನಾಲ್ವರು ಸಾವು.

ಮಂಗಳೂರು(ಮೈಸೂರು): ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವನಪ್ಪಿದ ಘಟನೆ ವರದಿಯಾಗಿದೆ. ಅನಿಲ ಸೋರಿಕೆಯಿಂದ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದ್ದು ಮೈಸೂರಿನ ಯರಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಸಾವನಪ್ಪಿದ್ದು ಮೃತರನ್ನು ಕುಮಾರಸ್ವಾಮಿ(45), ಪತ್ನಿ ಮಂಜುಳ(39)ಮಕ್ಕಳಾದ ಅರ್ಚನಾ(19), ಸ್ವಾತಿ(17) ಎಂದು ಗುರುತಿಸಲಾಗಿದೆ. ಮೃತರು ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರಿನವರಾಗಿದ್ದು ಮೈಸೂರಿನಲ್ಲಿ ನೆಲೆಸಿದ್ದರು. ದಂಪತಿಗಳು ಬಟ್ಟೆಗೆ ಇಸ್ತ್ರೀ ಹಾಕುವ ಕೆಲಸ ಮಾಡುತ್ತಿದ್ದರು. ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು,ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here