ಹರೀಶ್ ಪೂಂಜಾ ವಿರುದ್ಧ ಕೇಸ್-ಬೆಂಗಳೂರಿನತ್ತ ಹೊರಟ ಶಾಸಕ-ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಸಾಧ್ಯತೆ ?

ಮಂಗಳೂರು(ಬೆಂಗಳೂರು): ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಮತ್ತೆ ಎಫ್.ಐ‌.ಆರ್ ಆಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 353, 504ರಡಿ ಹರೀಶ್ ಪೂಂಜಾ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಅಂತಾ ದೂರು ದಾಖಲಾಗಿದೆ‌. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಹರೀಶ್ ಪೂಂಜಾ ನಿವಾಸದ ಬಳಿ ಹೈಡ್ರಾಮಾಮೇ ನಡೆದಿತ್ತು. ಬಂಧಿಸಲು ಆಗಮಿಸಿದ್ದ ಪೊಲೀಸರು ಕೊನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿ ತೆರಳಿದ್ದರು. ಇದೀಗ ಬೆಂಗಳೂರಿನತ್ತ ಹೊರಟಿರುವ ಹರೀಶ್ ಪೂಂಜಾ ಕೇಸ್​ ರದ್ದು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ನಿನ್ನೆ ಠಾಣಾ ಜಾಮೀನಿನ ಮೇಲೆ ಪೂಂಜಾ ಬಿಡುಗಡೆ ಮಾಡಲಾಗಿತ್ತು. ಮತ್ತೆ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್​ ಕೊಟ್ಟಿದ್ದರು. ಹೀಗಾಗಿ ನೋಟಿಸ್​ ಪ್ರಶ್ನಿಸಿ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here