ಲೈಂಗಿಕ ದೌರ್ಜನ್ಯ ಪ್ರಕರಣ – ಪ್ರಜ್ವಲ್ ರೇವಣ್ಣನಿಗೆ ‘ಎಚ್ಚರಿಕೆ ಪತ್ರ’ ಬರೆದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ಮುರಿದಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಪ್ರಜ್ವಲ್ ರೇವಣ್ಣನಿಗೆ ‘ಎಚ್ಚರಿಕೆ ಪತ್ರ’ ಬರೆದಿದ್ದಾರೆ.

ತಮ್ಮ ಸುದೀರ್ಘ ಪತ್ರವನ್ನು ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ, “ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ, “ನನ್ನ ಬಗ್ಗೆ ಪ್ರಜ್ವಲ್ ರೇವಣ್ಣನಿಗೆ ಏನಾದರೂ ಗೌರವವಿದ್ದರೆ ಎಲ್ಲಿದ್ದರೂ ಕೂಡ ಹಿಂದಿರುಗಬೇಕು. ಕಾನೂನನ್ನು ಎದುರಿಸಬೇಕು” ಎಂದು ತಿಳಿಸಿದ್ದಾರೆ. ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿರುವ ಈ ಪತ್ರವನ್ನು, ದೇವೇಗೌಡರು ಪ್ರಜ್ವಲ್ ರೇವಣ್ಣ ಅವರ ಟ್ವಿಟ್ಟರ್ ಖಾತೆಗೂ ಟ್ಯಾಗ್ ಮಾಡಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಜರ್ಮನಿಗೆ ಪರಾರಿಯಾಗಿದ್ದರು.

LEAVE A REPLY

Please enter your comment!
Please enter your name here