ಶಾಸಕನೆಂದ ಮಾತ್ರಕ್ಕೆ ಪೊಲೀಸರೊಂದಿಗೆ ಗಲಾಟೆ ಮಾಡಬಹುದಾ? – ಹರೀಶ್ ಪೂಂಜಾ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಮಂಗಳೂರು: ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಅದರಿಂದ ಹರೀಶ್ ಪೂಂಜಾನೂ ಹೊರತಾಗಿಲ್ಲ. ಅವರ ವಿರುದ್ಧ ದಾಖಲಾದ ಪ್ರಕರಣಗಳಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಾಸಕನೆಂದ ಮಾತ್ರಕ್ಕೆ ಪೊಲೀಸರ ವಿರುದ್ಧವೇ ಗಲಾಟೆ ಮಾಡುವುದು ಸರಿಯೇ? ಅಷ್ಟಕ್ಕೂ ಅವರು ಯಾರ ಪರವಾಗಿ ಗಲಾಟೆ ಮಾಡಿದ್ದೆಂದು‌ ನಿಮಗೆಲ್ಲ ಗೊತ್ತು ತಾನೇ ಎಂದು ಸಿದ್ದರಾಮಯ್ಯ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

LEAVE A REPLY

Please enter your comment!
Please enter your name here