ಕಾರು-ಟ್ರಕ್ ನಡುವೆ ಭೀಕರ ಅಪಘಾತ-ಮಗು ಸೇರಿ 6 ಮಂದಿ ಸ್ಥಳದಲ್ಲೇ ಸಾವು

ಮಂಗಳೂರು(ಹಾಸನ): ಟೊಯೋಟಾ ಇಟಿಯೋಸ್ ಕಾರು ಕಂಟೇನರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪದಲ್ಲಿ ಇಂದು(ಮೇ.26) ಬೆಳಗಿನ ಜಾವ ನಡೆದಿದ್ದು, ಒಂದೇ ಕುಟುಂಬದ ಇಬ್ಬರು ಮಹಿಳೆಯರು, ಮೂರು ಪುರುಷರು, ಒಂದು ಮಗು ಸೇರಿ 6 ಮಂದಿ ಮೃತಪಟ್ಟಿದ್ದಾರೆ.

ಮೃತರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ, ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದ ನಾರಾಯಣ ಸ್ವಾಮಿ, ಸುನಂದಾ, ರವಿಕುಮಾರ್, ನೇತ್ರ, ಚೇತನ್, ರಾಕೇಶ್ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು KA-53-C.1419 ನಂಬರ್‌ನ ಇಟಿಯೋಸ್ ಕಾರಿನಲ್ಲಿ ತೆರಳಿದ್ದ ಕುಟುಂಬ ಸದಸ್ಯರು ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ವಾಹನ ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ಲೇನ್ ಗೆ ಹಾರಿ ಕಂಟೇನರ್‌ಗೆ ಗುದ್ದಿದೆ. ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು ಒಳಗೆ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

LEAVE A REPLY

Please enter your comment!
Please enter your name here