ಮನೆ ಮಾಲೀಕ ಇಲ್ಲಿಲ್ಲ-ಬೀಗ ಹಾಕಿದ ಮನೆಗೆ ನುಗ್ಗಿದ ಕಳ್ಳರು-ಚಿನ್ನಾಭರಣಕ್ಕಾಗಿ ಹುಡುಕಾಟ-ಡಿ.ವಿ.ಆರ್ ಹೊತ್ತೊಯ್ದ ಕಳ್ಳರು

ಮಂಗಳೂರು(ವಿಟ್ಲ): ವಿಟ್ಲ ಪಡ್ನೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಮನೆಯಲ್ಲಿ ಕಳ್ಳರ ಕೈಚಳಕ ನಡೆಸಿದ್ದಾರೆ. ಮನೆ ಮಾಲೀಕ ಎಂ.ಕೆ.ಖಲೀಲ್ ಕುಟುಂಬ ಸಮೇತ ಯುಎಇ ಯ ಅಜ್ಮನ್ ನಲ್ಲಿದ್ದು ಆರು ತಿಂಗಳ ಹಿಂದಷ್ಟೇ ಊರಿಗೆ ಬಂದು ಹೋಗಿದ್ದರು. ಭಾನುವಾರ ಬೆಳಗ್ಗೆ ಪಕ್ಕದ ಮನೆಯವರು ಮುಂಭಾಗದ ಬಾಗಿಲು ತೆರೆದಿರುವುದನ್ನು ಗಮನಿಸಿದ್ದಾರೆ. ಅನುಮಾನದಿಂದ ಮನೆಗೆ ಹೋಗಿ ನೋಡಿದಾಗ ಅಂಗಳದಲ್ಲಿದ್ದ ಸಿ.ಸಿ.ಕ್ಯಾಮರಾದ ದಿಕ್ಕು ಬದಲಾಯಿಸಿ ಮುಂಭಾಗದ ಬಾಗಿಲು ಮುರಿದು ಕಳ್ಳರು ಒಳನುಗ್ಗಿರುವುದು ತಿಳಿದುಬಂದಿದೆ.

ಎ.ಸಿ.ಚಾಲು ಮಾಡಿಯೇ ಆರಾಮವಾಗಿ ನಾಲ್ಕು ಕಪಾಟುಗಳನ್ನು ಒಡೆದ ಕಳ್ಳರು ಸೊತ್ತುಗಳಿಗಾಗಿ ಗಂಟೆಗಳ ಕಾಲ ಸಾಕಷ್ಟು ಜಾಲಾಡಿದ್ದಾರೆ. ಕಪಾಟಿನಲ್ಲಿದ್ದ ಒಂದು ಲಕ್ಷ ರೂಪಾಯಿ ಮೌಲ್ಯದ ರಾಡೊ ವಾಚ್ ಮಾತ್ರ ಕಳ್ಳರ ಪಾಲಾಗಿದೆ. ಮಾಲೀಕ ಖಲೀಲ್ ಕುಟುಂಬ ವಿದೇಶದಲ್ಲಿರುವ ಕಾರಣ ಅದೃಷ್ಟವಶಾತ್ ಚಿನ್ನಾಭರಣಗಳೆಲ್ಲವೂ ಸೇಫಾಗಿದೆ. ಸೊತ್ತುಗಳಿಗಾಗಿ ಸಾಕಷ್ಟು ಜಾಲಾಡಿದ ಕಳ್ಳರು ಮರಳಿ ಹೋಗುವ ಸಂದರ್ಭ ಡಿ.ವಿ.ಆರ್ ಹೊತ್ತೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here