ಹಿಟ್‌ ಆ್ಯಂಡ್‌ ರನ್-ಸ್ಕೂಟರ್‌ಗೆ ಡಿಕ್ಕಿ‌ ಹೊಡೆದು ಕಾರು ಪರಾರಿ-ವಿಡಿಯೋ ವೈರಲ್

ಮಂಗಳೂರು(ಹರಿಯಾಣ):‌ ಹರಿಯಾಣದ ಗುರುಗ್ರಾಮ್ ಜಿಲ್ಲೆಯ ಖಾಲಿ ಬಸಾಯಿ ರಸ್ತೆಯಲ್ಲಿ ವೇಗವಾಗಿ ಬಂದ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು ಸ್ಕೂಟರ್ ಸವಾರ ಹಲವಾರು ಮೀಟರ್‌ಗಳಷ್ಟು ದೂರಕ್ಕೆ ಎಸೆಯಲ್ಪಟ್ಟಿದ್ದಾನೆ. ಘಟನೆಯ ನಂತರ ಕಾರು ನಿಲ್ಲಿಸದೆ ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದಾನೆ.

ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಬಹುತೇಕ ನಿರ್ಜನವಾಗಿದ್ದ ರಸ್ತೆಯಲ್ಲಿ ವೇಗವಾಗಿ ಬಂದ ಬಿಳಿ ಬಣ್ಣದ ಕಾರು ಮುಂದಿನಿಂದ ಚಲಿಸುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೇಲಕ್ಕೆ ಹಾರಿದ ಸ್ಕೂಟರ್ ಹಾಗೂ ಸವಾರ ಐವತ್ತು ಮೀಟರ್‌ಗಳಷ್ಟು ದೂರಕ್ಕೆ ಎಸೆಯಲ್ಪಟ್ಟಿದ್ದಾನೆ. ಕಾರನ್ನು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ದೇವಿಲಾಲ್ ಕಾಲೊನಿಯ ತರಕಾರಿ ವ್ಯಾಪಾರಿ ಪಂಕಜ್ ಜುನೇಜಾ ಗಂಭೀರವಾಗಿ ಗಾಯಗೊಂಡಿದ್ದು, ಗುರುಗ್ರಾಮದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪಂಕಜ್ ಜುನೇಜಾ ತಮ್ಮ ಸ್ಕೂಟರ್‌ನಲ್ಲಿ ಖಂಡಸಾ ತರಕಾರಿ ಮಾರುಕಟ್ಟೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತದ ನಂತರ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸ್ಥಳದಿಂದ ಪರಾರಿಯಾಗಿರುವ ಕಾರು ಮತ್ತು ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

https://x.com/i/status/1795033897983488034

LEAVE A REPLY

Please enter your comment!
Please enter your name here