ನಾಪತ್ತೆಯಾಗಿದ್ದ ಶಿಕ್ಷಕಿ ಅನ್ಯಕೋಮಿನ ಯುವಕನ ಜೊತೆ ಮದುವೆ-ಮುಸ್ಲಿಂ ಯುವತಿ ಹಿಂದೂ ಯುವಕನ ಜೊತೆ ಎಸ್ಕೇಪ್

ಮಂಗಳೂರು(ಕಾಸರಗೋಡು): ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಸರಗೋಡು ಶಾಲೆಯ ಶಿಕ್ಷಕಿಯೊಬ್ಬರು ಅನ್ಯಕೋಮಿನ ಯುವಕನ ಜೊತೆ ಪತ್ತೆಯಾಗಿದ್ದು,ಇದು ಲವ್ ಜಿಹಾದ್ ಎಂಬ ಆರೋಪ ಕೇಳಿಬಂದಿದೆ.‌

ಮೇ.23 ರಂದು ಮನೆಯಿಂದ ಹೊರಟಿದ್ದ ಶಿಕ್ಷಕಿ ಯುವತಿ ನಾಪತ್ತೆಯಾಗಿದ್ದರು. ಈ ಬಗ್ಗೆ ಬದಿಯಡ್ಕ ಠಾಣೆಯಲ್ಲಿ ಯುವತಿಯ ತಂದೆ ದೂರು ದಾಖಲಿಸಿದ್ದರು. ಇದೀಗ ಯುವತಿ ಅನ್ಯಕೋಮಿನ ಯುವಕನ ಜೊತೆ ಪತ್ತೆಯಾಗಿದ್ದು, ಇಬ್ಬರೂ ವಿವಾಹವಾಗಿದ್ದಾರೆ ಎನ್ನಲಾಗುತ್ತಿದೆ. ಬದಿಯಡ್ಕ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರ ಭಾವಚಿತ್ರವಿರುವ ನೋಟಿಸ್ ಪತ್ತೆಯಾಗಿದ್ದು, ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾಗಿ ಮೇ.27 ರಂದು ಬದಿಯಡ್ಕ ಪೊಲೀಸ್ ಠಾಣೆಗೆ ಬಂದು ಜೋಡಿ ಹಾಜರಾಗಿದೆ. ಇದೊಂದು ಲವ್ ಜಿಹಾದ್ ಪ್ರಕರಣವಾಗಿದ್ದು, ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಲವ್ ಜಿಹಾದ್ ಗೆ ಕೇರಳದ ಮುಸ್ಲಿಂ ಲೀಗ್ ನೇತಾರನೊಬ್ಬನ ತಂತ್ರ ಅಡಗಿದೆ ಎಂದು ಹಿಂದೂ ಪರ ಸಂಘಟನೆಗಳು ಆರೋಪಿಸಿದೆ.

ಇನ್ನೊಂದೆಡೆ ಹಿಂದೂ ಯುವಕ ಪರಮೇಶ್ ಮತ್ತು ಮುಸ್ಲಿಂ ಯುವತಿ ಪರಸ್ಪರ ಪ್ರೀತಿಸಿ ಓಡಿಹೋದ ಘಟನೆ ಬಳ್ಳಾರಿಯ ಸಿರಗುಪ್ಪದಲ್ಲಿ ನಡೆದಿದೆ.  ಇಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಪ್ರೀತಿಯ ವಿಷಯ ಮನೆಯವರಿಗೆ ತಿಳಿಯುತ್ತಲೇ ಮನೆಯಿಂದ ಎಸ್ಕೇಪ್‌ ಆಗಿದ್ದಾರೆ. ಪರಮೇಶ್‌ 20 ವರ್ಷದ ಯುವಕನಾಗಿದ್ದು, ಯುವತಿ 16 ವರ್ಷದ ಅಪ್ರಾಪ್ತೆಯಾಗಿದ್ದಾಳೆ. ಯುವತಿ ಮನೆಯವರು ಸಿರಗುಪ್ಪ ಪೊಲೀಸ್‌ ಠಾಣೆಯಲ್ಲಿ ಪರಮೇಶ್‌ ವಿರುದ್ಧ ದೂರು ದಾಖಲಿಸಿದ್ದು, ಯುವತಿಯನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here