ಕಣಿವೆಗೆ ಉರುಳಿದ ಬಸ್-21 ಮಂದಿ ಸಾವು, ಹಲವರಿಗೆ ಗಾಯ

ಮಂಗಳೂರು(ಜಮ್ಮು- ಕಾಶ್ಮೀರ): ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನಲ್ಲಿ ಬಸ್ ಕಣಿವೆಗೆ ಬಿದ್ದು 21 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮ್ಮು ಮತ್ತು ಪೂಂಛ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಹರ್ಯಾಣದ ಕುರುಕ್ಷೇತ್ರದಿಂದ ಬರುತ್ತಿದ್ದ ಬಸ್ ಇಲ್ಲಿನ ಅಖ್ನೂರ್ ಎಂಬಲ್ಲಿ ತೆರಳುತ್ತಿದ್ದಾಗ, ಆಯತಪ್ಪಿ ಕಣಿವೆಗೆ ಬಿದ್ದಿದೆ. ಅಪಘಾತದ ವೇಳೆ ಬಸ್‌ನಲ್ಲಿ 80ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹರ್ಯಾಣದಿಂದ ಯಾತ್ರಾರ್ಥಿಗಳು ಶಿವಖೋರಿಗೆ ತೆರಳುತ್ತಿದ್ದರು. ಬಸ್ 150 ಅಡಿ ಆಳದ ಕಣಿವೆಗೆ ಬಿದ್ದಿರುವುದು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಜನರು ಇದ್ದ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ಶಂಕಿಸಲಾಗಿದೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

https://x.com/i/status/1796118505802109143

LEAVE A REPLY

Please enter your comment!
Please enter your name here