ಕಾನ್ಸ್‌ಟೆಬಲ್‌ಗಳ ಅಂತರ್‌ ಜಿಲ್ಲಾ ವರ್ಗಾವಣೆ ಶೀಘ್ರ – ಅರ್ಹ ವರ್ಗಾವಣೆ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು- ಗೃಹ ಸಚಿವಾಲಯ

ಮಂಗಳೂರು(ಬೆಂಗಳೂರು): ಪೊಲೀಸ್ ಸಿಬ್ಬಂದಿಯ ಅಂತರ್ ಜಿಲ್ಲಾ ವರ್ಗಾವಣೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಗೃಹ ಸಚಿವಾಲಯ ಪ್ರಕಟಿಸಿದೆ.

ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿ ಇದ್ದ ಕಾರಣ ಎರಡು ತಿಂಗಳಿನಿಂದ ಅಂತರ್‌ ಜಿಲ್ಲಾ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಂಡಿದ್ದು, ಈಗಾಗಲೇ ಒಂದೂವರೆ ವರ್ಷದಿಂದ ಅಂತರ್ ಜಿಲ್ಲಾ ವರ್ಗಾವಣೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಪರಿಶೀಲಿಸಲಾಗಿಲ್ಲ. ತಕ್ಷಣ ಆದ್ಯತೆಯ ಮೇರೆಗೆ ಕೈಗೆತ್ತಿಕೊಂಡು ಅರ್ಹ ವರ್ಗಾವಣೆ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು. ಇದರಿಂದ ಪೊಲೀಸ್ ಇಲಾಖೆಯೂ ಸಮರ್ಪಕವಾಗಿ ಮತ್ತು ಸದೃಢವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here