ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಣಾಧೀನ ಕೈದಿ ಪುತ್ತೂರಿನ ಜಯೇಶ್ ಪೂಜಾರಿ

ಮಂಗಳೂರು/ಬೆಳಗಾವಿ: ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ನ್ಯಾಯಾಲಯ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ಜೂ.12 ರ ಬುಧವಾರ ಬೆಳಿಗ್ಗೆ ನಡೆದಿರುವ ಬಗ್ಗೆ ವರದಿಯಾಗಿದೆ.

ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಪುತ್ತೂರು ಮೂಲದ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ‌ ಎನ್ನಲಾಗಿದೆ. ಈ ವೇಳೆ ವಕೀಲರು ಮತ್ತು ಜನರು ಹೊಡೆಯುತ್ತಿದ್ದಂತೆ, ಕೈದಿಯನ್ನು ರಕ್ಷಿಸಿದ ಪೊಲೀಸರು ಎಪಿಎಂಸಿ ಠಾಣೆಗೆ ಕರೆದೊಯ್ದು ವಿಚಾರಣೆ ಮುಂದುವರಿಸಿದ್ದಾರೆ. ತಾನು ದಾವೂದ್ ಇಬ್ರಾಹಿಂ ತಂಡದಲ್ಲಿದ್ದೇನೆ ಎಂದು ಹೇಳಿಕೊಂಡಿದ್ದ ಜಯೇಶ್ ಪೂಜಾರಿ, ಈ ಹಿಂದೆ ಜೈಲಿನಲ್ಲಿ ಇದ್ದುಕೊಂಡೇ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಕರೆ ಮಾಡಿದ್ದ. 

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here