ವಿಚ್ಛೇದನ ಅರ್ಜಿ ವಜಾಗೊಳಿಸಿದ ಫ್ಯಾಮಿಲಿ ಕೋರ್ಟ್ – ನಟ ದುನಿಯಾ ವಿಜಯ್​ಗೆ ಸಿಗದ ವಿಚ್ಚೇದನ

ಮಂಗಳೂರು (ಬೆಂಗಳೂರು)‌: ಸ್ಯಾಂಡಲ್​ವುಡ್​ ನಟ ದುನಿಯಾ ವಿಜಯ್​ ಹಾಗು ನಾಗರತ್ನ ಅವರ ಸಂಸಾರದ ಗಲಾಟೆ ಇಂದು-ನಿನ್ನೆಯದಲ್ಲ. ಕ್ರೌರ್ಯದ ಆಧಾರದಲ್ಲಿ ವಿಜಯ್ ಅವರು ಡಿವೋರ್ಸ್​ಗೆ ಕೋರಿದ್ದರು. ಆದರೆ ಪತ್ನಿಯ ಮೇಲಿನ ಆರೋಪಗಳನ್ನು ಸಾಬೀತು ಮಾಡಲು ಸಾಧ್ಯವಾಗದ ಕಾರಣದಿಂದ ದುನಿಯಾ ವಿಜಯ್ ಅವರ ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ.

ಕನ್ನಡದ ಖ್ಯಾತ ನಟ ದುನಿಯಾ ವಿಜಯ್​ ಅವರು ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಬೇಕು ಎಂದು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್​ನಲ್ಲಿ ದುನಿಯಾ ವಿಜಯ್​ ಅವರು ಅರ್ಜಿ ಸಲ್ಲಿಸಿದ್ದರು. ಕ್ರೌರ್ಯದ ಆಧಾರದಲ್ಲಿ ಅವರು ವಿಚ್ಛೇದನ ಕೋರಿದ್ದರು. ಆದರೆ ಪತ್ನಿ ನಾಗರತ್ನ ಮೇಲಿನ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ದುನಿಯಾ ವಿಜಯ್ ಅವರ ಅರ್ಜಿಯನ್ನು ವಜಾಗೊಳಿಸಿ ಫ್ಯಾಮಿಲಿ ಕೋರ್ಟ್ ಆದೇಶ ಹೊರಡಿಸಿದೆ.

LEAVE A REPLY

Please enter your comment!
Please enter your name here