ಭೀಕರ ರಸ್ತೆ ಅಪಘಾತ – ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು – ಕಾರಿನಲ್ಲಿದ್ದ ನಾಲ್ವರು ಅಪಾಯದಿಂದ ಪಾರು 

ಮಂಗಳೂರು/ಉಡುಪಿ: ಉಡುಪಿ ನಗರದ ಅಂಬಾಗಿಲು ಭಾಗದಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರೊಂದು ಪಲ್ಟಿಯಾಗಿ ನಜ್ಜುಗುಜ್ಜಾದ ಘಟನೆ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತಿದ್ದ ಮಾರುತಿ ಎಸ್ ಕ್ರಾಸ್ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅತೀ ವೇಗವೇ ಇದಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಾತ್ರವಲ್ಲದೆ ಕಾರಿನ ಬಿಡಿ ಭಾಗಗಳು ರಸ್ತೆಯೆಲ್ಲಾ ಹರಡಿಕೊಂಡಿವೆ. ಕಾರಿನ ಇಂಜಿನ್​ ಕೆಲವು ಅಡಿಗಳಷ್ಟು ದೂರ ಹೋಗಿ ಬಿದ್ದಿದೆ.   

LEAVE A REPLY

Please enter your comment!
Please enter your name here