ಕೊಲೆಗೈದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ

ಮಂಗಳೂರು/ಸುಳ್ಯ: ಯುವಕನೊಬ್ಬನ ಮೃತದೇಹವು ಕೊಲೆಗೈದ ಸ್ಥಿತಿಯಲ್ಲಿ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ  ಸಮೀಪದ ಸರ್ಕಾರಿ ಶಾಲಾ ಆವರಣದ ಜಗಲಿಯಲ್ಲಿ ಇಂದು(ಜೂ.17) ಬೆಳಿಗ್ಗೆ ಪತ್ತೆಯಾಗಿದೆ.

ಕೊಲೆಯಾದ ಅಪರಿಚಿತ ಯುವಕ 25 ರಿಂದ 30 ವರ್ಷದೊಳಗಿನವನೆಂದು ಊಹಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ, ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here