ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾರ್ಯಕ್ರಮ – ʼಜಗತ್ತೇ ಶೂನ್ಯ ಸ್ವಾಮಿ’ ನಾಟಕದ ಮುಹೂರ್ತ –  ಶುಭಹಾರೈಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಲಯನ್ ಕಿಶೋರ್ ಡಿ ಶೆಟ್ಟಿ ನಿರ್ಮಾಣದ, ಶಿವಾನಂದ ಶೆಟ್ಟಿ ಮಂಗಲ್ಪಾಡಿ ಸಂಚಾಲಕತ್ವದಲ್ಲಿ, ಸೋಮನಾಥ ಶೆಟ್ಟಿ ಮಂಗಲ್ಪಾಡಿ ರಚನೆಯ, ತುಳುನಾಡ ಕಲಾ ಬಿರ್ಸೆ ದೀಪಕ್ ರೈ ಪಾಣಾಜೆ ಹಾಗೂ ಮಂಗಳೂರು ಮೀನನಾಥ ರಾಘವೇಂದ್ರ ರೈ ಅಭಿನಯದ, ರಂಗ್‌ದ ರಾಜೆ ಸುಂದರ್ ರೈ ಮಂದಾರ ನಿರ್ದೇಶನದ ಹಾಗೂ ಅಭಿನಯದ ಅಮ್ಮ ಕಲಾವಿದೆರ್ ಕುಡ್ಲ ಇವರ ಈ ವರ್ಷದ ಹೊಸ ನಾಟಕ “ಜಗತ್ತೇ ಶೂನ್ಯ ಸ್ವಾಮಿ” ಇದರ ಮುಹೂರ್ತ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.

ಮುಹೂರ್ತ ಸಮಾರಂಭಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ ದ.ಕ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ನಾಟಕ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕರಾದ ಲಯನ್ ಕಿಶೋರ್ ಡಿ ಶೆಟ್ಟಿ, ಸಂಚಾಲಕ ಶಿವಾನಂದ ಶೆಟ್ಟಿ ಮಂಗಲ್ಪಾಡಿ, ನಟ-ನಿರ್ದೇಶಕ ಸುಂದರ್ ರೈ ಮಂದಾರ, ಕಲಾವಿದರಾದ ದೀಪಕ್ ರೈ ಪಾಣಾಜೆ, ಮಂಜುಳಾ ಜನಾರ್ಧನ್, ನಾಟಕ ರಚನೆಕಾರ ಸೋಮನಾಥ ಶೆಟ್ಟಿ ಮಂಗಲ್ಪಾಡಿ ಹಾಗೂ ತಂಡದ ಎಲ್ಲಾ ಹಿರಿಯ ಮತ್ತು ಕಿರಿಯ ಕಲಾವಿದರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here